Skip to main content

Model question papers for FDA AND SDA EXAM Conducted by kpsc

ಮುಂಬರುವ ಎಫ್ ಡಿ ಎ ಮತ್ತು ಎಸ್ ಡಿ ಎ  ಪರೀಕ್ಷೆಗೆ  ಸಹಾಯಕವಾಗುವ ಮಾದರಿ ಪ್ರಶ್ನೆ ಪತ್ರಿಕೆಯನ್ನು  ಈ ಅಂಕಣದಲ್ಲಿ ನೀಡಲಾಗಿದೆ.
1) 2017 ರ ಆನೆ ಗಣತಿಯ ಮುಖ್ಯಾಂಶಗಳು
ದೇಶದಲ್ಲಿರುವ ಒಟ್ಟು ಆನೆಗಳ ಸಂಖ್ಯೆ- 27,312
ದಕ್ಷಿಣ ಭಾರತದಲ್ಲಿ ಇರುವ ಆನೆಗಳ ಸಂಖ್ಯೆ- 11960
ಈಶಾನ್ಯ ಭಾರತದಲ್ಲಿ ಇರುವ ಆನೆಗಳ ಸಂಖ್ಯೆ- 10,139
ಉತ್ತರ ಭಾರತದಲ್ಲಿ ಇರುವ ಆನೆಗಳ ಸಂಖ್ಯೆ- 2085
ಪೂರ್ವ ಕೇಂದ್ರ ವಲಯ -3128

ಅತಿ ಹೆಚ್ಚು ಆನೆಗಳ ಸಂಖ್ಯೆ ಹೊಂದಿರುವ ರಾಜ್ಯಗಳು
ಪ್ರಥಮ ಸ್ಥಾನ ಕರ್ನಾಟಕ- 6049
ದ್ವಿತೀಯ ಸ್ಥಾನ ಅಸ್ಸಾಂ- 5719
ತೃತೀಯ ಸ್ಥಾನ ಕೇರಳ- 3054
ನಾಲ್ಕನೇ ಸ್ಥಾನ- ತಮಿಳುನಾಡು- 2761
•ವಿಶ್ವ ಆನೆಗಳ ದಿನ-ಆಗಸ್ಟ್ 12
•ಗಜಯಾತ್ರಾ ಯೋಜನೆ- ದೇಶಾದ್ಯಂತ ಆನೆಗಳ ನ್ನು ಸಂರಕ್ಷಿಸುವ ಉದ್ದೇಶದಿಂದ ಆರಂಭಿಸಲಾದ ಅಭಿಯಾನ 2017 ರ ಆಗಸ್ಟ್ 12 ರಿಂದ ಪ್ರಾರಂಭ.



2) ದೇಶದ ಮೊದಲ ರಾಷ್ಟ್ರೀಯ ಕ್ರೀಡಾ ವಿಷಯಗಳ ವಿ .ವಿ ಮಣಿಪುರದಲ್ಲಿ ಸ್ಥಾಪನೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

3)ಮಾನ್ಸುನ್ ಟೂರಿಸಂ  ವರದಿ 2017
•ಸಮೀಕ್ಷೆ ನಡೆಸಿದವರು  -" ಮೇಕ್ ಮೈ ಟ್ರಿಪ್ ಆನ್ ಲೈನ್ ಟ್ರಾವೆಲ್ಸ್  ಕಂಪನಿ.
• ಮಳೆಗಾಲದಲ್ಲಿ ಭಾರತೀಯರು ಭೇಟಿ ನೀಡಲು ಬಯಸುವ ಜನಪ್ರಿಯ ದೇಶೀಯ ತಾಣಗಳ ಪಟ್ಟಿ ಕೆಳಗಿನಂತೆ ಇದೆ.
ಮೊದಲ ಸ್ಥಾನ- ಗೋವಾ
ಎರಡನೆಯ ಸ್ಥಾನ- ಹಿಮಾಚಲ ಪ್ರದೇಶ ದ ಮನಾಲಿ
ಮೂರನೆಯ ಸ್ಥಾನ-  ಮೈಸೂರು
ನಾಲ್ಕನೇ ಸ್ಥಾನ- ಊಟಿ


ಅಂತರರಾಷ್ಟ್ರೀಯ ತಾಣಗಳ ಪಟ್ಟಿ
ಪ್ರಥಮ ಸ್ಥಾನ- ದುಬೈ
ಎರಡನೆಯ ಸ್ಥಾನ-  ಸಿಂಗಪುರ
ಮೂರನೆಯ ಸ್ಥಾನ- -ಥೈಲ್ಯಾಂಡ್
ನಾಲ್ಕನೇ ಸ್ಥಾನ- ಮಲೇಶಿಯಾ


4) ಕರ್ನಾಟಕ ರಾಜ್ಯದ ಚಾಮರಾಜನಗರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಹರಡಿರುವ  ಕಾವೇರಿ ವನ್ಯ ಜೀವಿ ಧಾಮ ವನ್ನು  ಕೇಂದ್ರ ಸರ್ಕಾರವು ವನ್ಯ ಜೀವಿ ಪರಿಸರ ಸೂಕ್ಷ್ಮ ವಲಯವೆಂದು ಘೋಷಣೆ ಮಾಡಿದೆ.


5) ಭಾರತದ ಮೊದಲ ವಿಶ್ವ ಪಾರಂಪರಿಕ ನಗರ - ಅಹಮದಾಬಾದ್. 

Comments

Popular posts from this blog

ಸವರ್ಣ ದೀರ್ಘ ಸಂಧಿ. ಸವರ್ಣ ದೀರ್ಘ ಸಂಧಿ ಉದಾಹರಣೆಗಳು savarna dhirgha sandhi. Savarna dhirgha sandhi examples

ಸವರ್ಣ ದೀರ್ಘ ಸಂಧಿ. [ ] ಪೂರ್ವ ಪದದ ಅಂತ್ಯ ಸ್ವರ ಮತ್ತು ಉತ್ತರ ಪದದ ಆರಂಭದ ಸ್ವರ ಒಂದೇ ರೀತಿಯ ವರ್ಣವಾಗಿದ್ದರೆ , ಸಂಧಿಕಾರ್ಯ ನಡೆಯುವಾಗ ಅದೇ ಸ್ವರದ ದೀರ್ಘ ಸ್ವರವು ಆದೇಶವಾಗಿರುವುದು ಕಂಡು ಬರುತ್ತದೆ. [ ] ಸಂಧಿಕಾರ್ಯ ನಡೆಯುವಾಗ ಒಂದೇ ರೀತಿಯ ಸ್ವರಾಕ್ಷರಗಳು ಪರಸ್ಪರ ಸೇರಿ ದೀರ್ಘ ಸ್ವರ ಆದೇಶವಾದರೆ ಅಂತಹ ಸಂಧಿಯನ್ನು "ಸವರ್ಣ ದೀರ್ಘ ಸಂಧಿ "ಎಂದು ಕರೆಯುತ್ತಾರೆ. [ ] ಸವರ್ಣಾಕ್ಷರಗಳಿಗೆ ಸವರ್ಣಾಕ್ಷರಗಳ ಪರವಾಗಿ ಸವರ್ಣ ದೀರ್ಘಾಕ್ಷರಗಳು ಬಂದರೆ ಸವರ್ಣ ದೀರ್ಘ ಸಂಧಿ. [ ] ಉದಾಹರಣೆಗೆ ಪೂರ್ವ ಪದ + ಉತ್ತರ ಪದ = ಸಂಧಿಪದ 1. ರವಿ + ಇಂದ್ರ = ರವೀಂದ್ರ ( ಇ+ಇ= ಈ) 2. ದೇವ+ ಆಲಯ= ದೇವಾಲಯ. (ಅ+ಆ=ಆ) 3. ಗುರು+ ಉಪದೇಶ =ಗುರೂಪದೇಶ (ಉ+ಉ=ಊ) 4. ಮಹಾ+ ಆತ್ಮ = ಮಹಾತ್ಮ (ಆ+ಆ=ಆ) 5. ಗಿರಿ+ ಇಂದ್ರ = ಗಿರೀಂದ್ರ 6. ಮುನಿ+ ಇಂದ್ರ =ಮುನೀಂದ್ರ. 7. ಅಲ್ಪ + ಅಕ್ಷರ =ಅಲ್ಪಾಕ್ಷರ. 8. ವಿದ್ಯ+ ಅರ್ಜನೆ=ವಿದ್ಯಾರ್ಜನೆ. 9. ರಾಕ್ಷಸ + ಅಧಿಪತಿ= ರಾಕ್ಷಸಾಧಿಪತಿ. 10. ಸೀತ+ಅನ್ವೇಷಣೆ= ಸೀತಾನ್ವೇಷಣೆ. 11. ಪಂಚ+ಆಸ್ಯ=ಪಂಚಾಸ್ಯ. 12. ಶಾಸಕ+ಅಂಗ=ಶಾಸಕಾಂಗ. 13. ಅಭಯ+ಅರಣ್ಯ =ಅಭಯಾರಣ್ಯ. 14. ಉಭಯ+ಅರಣ್ಯ =ಉಭಯಾರಣ್ಯ 15. ವಸ್ರ್ತ + ಆಭರಣ= ವಸ್ತ್ರಾಭರಣ. 16. ಗೌರಿ+ಈಶ =ಗೌರೀಶ. 17. ಕಟು+ಉಕ್ತಿ=ಕಟೂಕ್ತಿ. 18. ಕೃಷ್ಣ +ಅಜಿನ=ಕೃಷ್ಣಾಜಿನ. 19. ಪೀತ+ಅಂಬರ=ಪೀತಾಂಬರ. 20. ಏಕ+ಆಸ...

ಡಾ.ಸತ್ಯಾನಂದ ಪಾತ್ರೋಟ Dr.satyananda patrota

• ಡಾ.ಸತ್ಯಾನಂದ ಪಾತ್ರೋಟ • ಜನನ- ಬಾಗಲಕೋಟೆ • ವಿದ್ಯಾಭ್ಯಾಸ ~ಎಂ.ಎ., ಪಿ.ಎಚ್.ಡಿ. • ಉದ್ಯೋಗ ~ ಬಾಗಲಕೋಟೆಯ ಎಸ್.ಬಿ.ಪಾಟೀಲ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಅಧ್ಯಾಪಕರು. • ಕವನ ಸಂಕಲನಗಳು 1. ಕರಿನೆಲದ ಕಲೆಗಳು 2. ಜಾಜಿ ಮಲ್ಲಿಗೆ 3. ಕಲ್ಲಿಗೂ ಗೊತ್ತಿರುವ ಕಥೆ. 4. ಕರಿಯ ಕಟ್ಟಿದ ಕವನ 5. ನನ್ನ ಕನಸಿನ ಹುಡುಗಿ 6. ನದಿಗೊಂದು ಕನಸು ಮತ್ತು ಅವಳು ನಾಟಕಗಳು 1. ನಮಗ ಯಾರು ಇಲ್ಲೋ ಎಪ್ಪಾ ಸಾಕ್ಷಿ 2. ಮತ್ತೊಬ್ಬ ಏಕಲವ್ಯ ಪ್ರಬಂಧ ಸಂಕಲನ 1. ಒಂದಿಷ್ಟು ಕ್ಷಣಗಳು ಕಾವ್ಯದ ಧ್ವನಿಸುರುಳಿ 1. ಎದೆಯ ಮಾತು ಪ್ರಶಸ್ತಿ- ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Kannada grammar for kpsc exams ಕೆ.ಪಿ.ಎಸ್. ಸಿ.ಪರೀಕ್ಷೆಗಳಿಗೆ ಕನ್ನಡ ವ್ಯಾಕರಣ

 ಕೆ.ಪಿ.ಎಸ್. ಸಿ ನಡೆಸುವ ಪ್ರತಿಯೊಂದು ಪರೀಕ್ಷೆಗಳಲ್ಲಿ ಕನ್ನಡಕ್ಕೆ ಸಂಬಂಧಪಟ್ಟಂತೆ 35 ಅಂಕಗಳನ್ನು ನಿಗದಿಪಡಿಸಲಾಗಿದೆ. ಪರೀಕ್ಷೆಗೆ ಅನಕೂಲವಾಗಲೆಂದು  ಕನ್ನಡ ವ್ಯಾಕರಣಕ್ಕೆ ಸಂಬಂಧಪಟ್ಟ ಕೆಲವು ಮಾಹಿತಿ ಸಂಗ್ರಹಿಸಿ ಸ್ಪರ್ಧಾರ್ಥಿಗಳ ಅನುಕೂಲಕ್ಕಾಗಿ ನೀಡಲಾಗಿದೆ.ಆಸಕ್ತರು ಇದರ ಸದುಪಯೋಗ ಪಡೆಯಬಹುದು. □  □ □ □ □ □ □ □ □ □ □ □ □ □ □     ತತ್ಸಮ - - - -  - - - - - - - - - ತದ್ಭವ (ಸಂಸ್ಕೃತ )                    (ಕನ್ನಡ ) ■ ನರ್ತಕಿ - ನಚ್ಚಣಿ ■ ಲಕ್ಷ್ಮಿ - ಲಕ್ಕಿ ,ಲಕುಮಿ ■ವೇಷ - ವೇಸ ■ಲೇಪ - ಲಪ್ಪ ■ವರ್ಧಮಾನ - ಬದ್ದವಣ ■ವಜ್ರ - ಬಜ್ಜರ ■ವತ್ಸಲಾ - ಬಚ್ಚಳೆ ■ವಿಸ್ತಾರ - ಬಿತ್ತರ ■ವೃದ್ಧ - ವಡ್ಡ ■ವೃದ್ಧಿ - ಬಡ್ಡಿ ■ವ್ಯಾಖ್ಯಾನ - ವಕ್ಕಣೆ ■ವ್ಯಾಘ್ರ - ಬಗ್ಗ ■ವರ್ಧಕಿ - ಬಡಗಿ ■ವಿದ್ಯೆ - ಬಿಜ್ಜೆ ■ವೈದ್ಯ - ಬೆಜ್ಜ ■ವಿಜ್ಞಾನ - ಬಿನ್ನಣ ■ಶಿಲ್ಪಕ,ಶಿಲ್ಪಿ - ಸಿಂಪಿಗ ,ಚಿಪ್ಪಿಗ ■ಶೂನ್ಯ - ಸೊನ್ನೆ ■ಅವಸ್ಥೆ - ಅವತೆ ■ಅರ್ಹ - ಅರುಹ ■ಅರ್ಗಲ,ಅರ್ಗಲೆ - ಅಗಳಿ,ಅಗುಳಿ (ಚಿಲಕ) ■ಅಂಗುಷ್ಠ - ಅಂಗುಟ ,ಉಂಗುಟ. ■ಆಲಸ್ಯ - ಆಲಸ ■ಆಜ್ಞಾ, ಆಜ್ಞೆ - ಆಣೆ ■ಕ್ರಕಚ - ಗರಗಸ ■ಕ್ಷಣ - ಚಣ ■ಗ್ರಹ - ಗರ ■ಗ್ರಹಣ - ಗರಣ ■ಗ್ರಾಮೀಣ - ಗಾವಿಲ ■ಲಕ್ಷ - ಲಕ್ಕ ■ ಶ್ರೇಷ್ಠಿ -...