Skip to main content

Model question papers for KAS Mains exam conducted by kpsc ಕ ೆಎಎಸ್ ಮುಖ್ಯ ಪರೀಕ್ಷೆ ಗೆ ಮಾದರಿ ಪ್ರಶ್ನೆ ಪತ್ರಿಕೆ

ಮುಂಬರುವ ಡಿಸೆಂಬರ್ ನಲ್ಲಿ ಕೆಪಿಎಸ್ ಸಿ ನಡೆಸಲು ನಿರ್ಧರಿಸಿದ ಕ ೆಎಎಸ್ ಮುಖ್ಯ ಪರೀಕ್ಷೆ ಬರೆಯಲು ತಯಾರಾಗುತ್ತಿರುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಮಾದರಿ ಪ್ರಶ್ನೆ ಪತ್ರಿಕೆಯನ್ನು ನೀಡಲಾಗಿದೆ. ಅಭ್ಯರ್ಥಿಗಳು ಇದರ ಸದುಪಯೋಗ ಪಡೆದು ಉತ್ತಮ ಅಂಕಗಳನ್ನು ಪಡೆಯಬಹುದು.
ಮಾದರಿ ಪ್ರಶ್ನೆ ಪತ್ರಿಕೆ
1 - ಸಾರ್ವಜನಿಕ ಆಡಳಿತ
ಪತ್ರಿಕೆ- 1
                ಭಾಗ- 1
1) a)ನವ ಸಾರ್ವಜನಿಕ ಆಡಳಿತದ ಮೂಲ ತತ್ವವೇನೆಂದರೆ' ಪ್ರಾಮಾಣಿಕ ಸಿದ್ದಾಂತ, ತಾತ್ವಿಕತೆ, ಸಾಮಾಜಿಕ ಕಾಳಜಿ ಹಾಗು ಸಕ್ರಿಯತಾವಾದದ ಕಡೆಗೆ ಒಂದು ರೀತಿಯ ಚಲನೆ. ' ಪರಾಮರ್ಶಿಸಿ.  25 ಅಂಕಗಳು


b)ಅಧಿಕಾರದ ಶ್ರೇಣೀಕರಣ ಹಾಗೂ ನಿಯಮಗಳ ವ್ಯವಸ್ಥೆಯಿಂದ ವ್ಯಕ್ತಿತ್ವ ಲೋಪ ಹಾಗೂ ದಕ್ಷತೆ ಸಾಧ್ಯವಾಗುತ್ತದೆ. ವಿವರಿಸಿ.  25 ಅಂಕಗಳು.

2) ಮಾನವನ ಅಗತ್ಯಗಳನ್ನು ಕುರಿತ ಮಾಸ್ಲೋ ಸಿದ್ದಾಂತ  ಹಾಗು ಹರ್ಜಬರ್ಗ ನ ಪ್ರೇರಣೆ ಮತ್ತು ಹೈಜಿಯನ್ ಸಿದ್ಧಾಂತವನ್ನು ಕುರಿತ ಪರಿಕಲ್ಪನೆಯ ಸಾಪೇಕ್ಷ ಉತ್ತಮಿಕೆಯನ್ನು ಹೋಲಿಸಿ.   50 ಅಂಕಗಳು

3) ಭಾರತದ ಆಯವ್ಯಯ ಅಂದಾಜು ಪತ್ರದ ಸಿದ್ಧತೆ, ಅನುಶಾಸನ ಹಾಗೂ ಅನುಷ್ಠಾನದ ವಿವಿಧ ಹಂತಗಳನ್ನು ವಿವರಿಸಿ. 50 ಅಂಕಗಳು.

4)ಸಂಚಾರ ಸಂದೇಶವು  ನಿರ್ವಹಣೆಯ ಹೃದಯ ಮತ್ತು ಸಂಘಟನೆ ಯ ರಕ್ತ ಪ್ರವಾಹ  ಎಂದು ವರ್ಣಿಸಲಾಗಿದೆ. ಚರ್ಚಿಸಿ.  50 ಅಂಕಗಳು

                  ಭಾಗ -

5)a) ಸಮಕಾಲೀನ ಜಗತ್ತಿನಲ್ಲಿ ಸಾರ್ವಜನಿಕ ಆಡಳಿತ  ವಿಷಯಕ್ಕೆ ಇರುವ ವ್ಯಾಪ್ತಿ ಅವಕಾಶ ಕುರಿತು  ವಿವರಿಸಿ.  25 ಅಂಕಗಳು


b) ಆಜ್ಞಾಪನೆ ಸರಪಳಿಯಲ್ಲಿ ಅಧಿಕಾರ ಪ್ರತಿನಿಯೋಜನೆಯಿಂದಾಗುವ ಅನುಕೂಲತೆಗಳನ್ನು ನಿರೂಪಿಸಿ. 25 ಅಂಕಗಳು


6)ಸಾರ್ವಜನಿಕ ಮತ್ತು ಖಾಸಗಿ ಆಡಳಿತಗಳಿಗೆ ಇರುವ ವ್ಯತ್ಯಾಸಗಳ ನ್ನು ವಿವರಿಸಿ.   50 ಅಂಕಗಳು


7) "ಆಡಳಿತಾತ್ಮಕ ನಾಯಕತ್ವದ "ಅಗತ್ಯ ಲಕ್ಷಣಗಳನ್ನುಚರ್ಚಿಸಿ. 50  ಅಂಕಗಳು.


8)  ಸಾರ್ವಜನಿಕ ಆಡಳಿತದಲ್ಲಿ "ವ್ಯವಸ್ಥೆ ಗಳ ಸಿದ್ದಾಂತ ದ " ಮುಖ್ಯ ತತ್ವಗಳು ಯಾವುವು...ಪರಾಮರ್ಶೆ ಮಾಡಿ.  50 ಅಂಕಗಳು


Comments

Popular posts from this blog

ಸವರ್ಣ ದೀರ್ಘ ಸಂಧಿ. ಸವರ್ಣ ದೀರ್ಘ ಸಂಧಿ ಉದಾಹರಣೆಗಳು savarna dhirgha sandhi. Savarna dhirgha sandhi examples

ಸವರ್ಣ ದೀರ್ಘ ಸಂಧಿ. [ ] ಪೂರ್ವ ಪದದ ಅಂತ್ಯ ಸ್ವರ ಮತ್ತು ಉತ್ತರ ಪದದ ಆರಂಭದ ಸ್ವರ ಒಂದೇ ರೀತಿಯ ವರ್ಣವಾಗಿದ್ದರೆ , ಸಂಧಿಕಾರ್ಯ ನಡೆಯುವಾಗ ಅದೇ ಸ್ವರದ ದೀರ್ಘ ಸ್ವರವು ಆದೇಶವಾಗಿರುವುದು ಕಂಡು ಬರುತ್ತದೆ. [ ] ಸಂಧಿಕಾರ್ಯ ನಡೆಯುವಾಗ ಒಂದೇ ರೀತಿಯ ಸ್ವರಾಕ್ಷರಗಳು ಪರಸ್ಪರ ಸೇರಿ ದೀರ್ಘ ಸ್ವರ ಆದೇಶವಾದರೆ ಅಂತಹ ಸಂಧಿಯನ್ನು "ಸವರ್ಣ ದೀರ್ಘ ಸಂಧಿ "ಎಂದು ಕರೆಯುತ್ತಾರೆ. [ ] ಸವರ್ಣಾಕ್ಷರಗಳಿಗೆ ಸವರ್ಣಾಕ್ಷರಗಳ ಪರವಾಗಿ ಸವರ್ಣ ದೀರ್ಘಾಕ್ಷರಗಳು ಬಂದರೆ ಸವರ್ಣ ದೀರ್ಘ ಸಂಧಿ. [ ] ಉದಾಹರಣೆಗೆ ಪೂರ್ವ ಪದ + ಉತ್ತರ ಪದ = ಸಂಧಿಪದ 1. ರವಿ + ಇಂದ್ರ = ರವೀಂದ್ರ ( ಇ+ಇ= ಈ) 2. ದೇವ+ ಆಲಯ= ದೇವಾಲಯ. (ಅ+ಆ=ಆ) 3. ಗುರು+ ಉಪದೇಶ =ಗುರೂಪದೇಶ (ಉ+ಉ=ಊ) 4. ಮಹಾ+ ಆತ್ಮ = ಮಹಾತ್ಮ (ಆ+ಆ=ಆ) 5. ಗಿರಿ+ ಇಂದ್ರ = ಗಿರೀಂದ್ರ 6. ಮುನಿ+ ಇಂದ್ರ =ಮುನೀಂದ್ರ. 7. ಅಲ್ಪ + ಅಕ್ಷರ =ಅಲ್ಪಾಕ್ಷರ. 8. ವಿದ್ಯ+ ಅರ್ಜನೆ=ವಿದ್ಯಾರ್ಜನೆ. 9. ರಾಕ್ಷಸ + ಅಧಿಪತಿ= ರಾಕ್ಷಸಾಧಿಪತಿ. 10. ಸೀತ+ಅನ್ವೇಷಣೆ= ಸೀತಾನ್ವೇಷಣೆ. 11. ಪಂಚ+ಆಸ್ಯ=ಪಂಚಾಸ್ಯ. 12. ಶಾಸಕ+ಅಂಗ=ಶಾಸಕಾಂಗ. 13. ಅಭಯ+ಅರಣ್ಯ =ಅಭಯಾರಣ್ಯ. 14. ಉಭಯ+ಅರಣ್ಯ =ಉಭಯಾರಣ್ಯ 15. ವಸ್ರ್ತ + ಆಭರಣ= ವಸ್ತ್ರಾಭರಣ. 16. ಗೌರಿ+ಈಶ =ಗೌರೀಶ. 17. ಕಟು+ಉಕ್ತಿ=ಕಟೂಕ್ತಿ. 18. ಕೃಷ್ಣ +ಅಜಿನ=ಕೃಷ್ಣಾಜಿನ. 19. ಪೀತ+ಅಂಬರ=ಪೀತಾಂಬರ. 20. ಏಕ+ಆಸ...

ಡಾ.ಸತ್ಯಾನಂದ ಪಾತ್ರೋಟ Dr.satyananda patrota

• ಡಾ.ಸತ್ಯಾನಂದ ಪಾತ್ರೋಟ • ಜನನ- ಬಾಗಲಕೋಟೆ • ವಿದ್ಯಾಭ್ಯಾಸ ~ಎಂ.ಎ., ಪಿ.ಎಚ್.ಡಿ. • ಉದ್ಯೋಗ ~ ಬಾಗಲಕೋಟೆಯ ಎಸ್.ಬಿ.ಪಾಟೀಲ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಅಧ್ಯಾಪಕರು. • ಕವನ ಸಂಕಲನಗಳು 1. ಕರಿನೆಲದ ಕಲೆಗಳು 2. ಜಾಜಿ ಮಲ್ಲಿಗೆ 3. ಕಲ್ಲಿಗೂ ಗೊತ್ತಿರುವ ಕಥೆ. 4. ಕರಿಯ ಕಟ್ಟಿದ ಕವನ 5. ನನ್ನ ಕನಸಿನ ಹುಡುಗಿ 6. ನದಿಗೊಂದು ಕನಸು ಮತ್ತು ಅವಳು ನಾಟಕಗಳು 1. ನಮಗ ಯಾರು ಇಲ್ಲೋ ಎಪ್ಪಾ ಸಾಕ್ಷಿ 2. ಮತ್ತೊಬ್ಬ ಏಕಲವ್ಯ ಪ್ರಬಂಧ ಸಂಕಲನ 1. ಒಂದಿಷ್ಟು ಕ್ಷಣಗಳು ಕಾವ್ಯದ ಧ್ವನಿಸುರುಳಿ 1. ಎದೆಯ ಮಾತು ಪ್ರಶಸ್ತಿ- ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Kannada grammar for kpsc exams ಕೆ.ಪಿ.ಎಸ್. ಸಿ.ಪರೀಕ್ಷೆಗಳಿಗೆ ಕನ್ನಡ ವ್ಯಾಕರಣ

 ಕೆ.ಪಿ.ಎಸ್. ಸಿ ನಡೆಸುವ ಪ್ರತಿಯೊಂದು ಪರೀಕ್ಷೆಗಳಲ್ಲಿ ಕನ್ನಡಕ್ಕೆ ಸಂಬಂಧಪಟ್ಟಂತೆ 35 ಅಂಕಗಳನ್ನು ನಿಗದಿಪಡಿಸಲಾಗಿದೆ. ಪರೀಕ್ಷೆಗೆ ಅನಕೂಲವಾಗಲೆಂದು  ಕನ್ನಡ ವ್ಯಾಕರಣಕ್ಕೆ ಸಂಬಂಧಪಟ್ಟ ಕೆಲವು ಮಾಹಿತಿ ಸಂಗ್ರಹಿಸಿ ಸ್ಪರ್ಧಾರ್ಥಿಗಳ ಅನುಕೂಲಕ್ಕಾಗಿ ನೀಡಲಾಗಿದೆ.ಆಸಕ್ತರು ಇದರ ಸದುಪಯೋಗ ಪಡೆಯಬಹುದು. □  □ □ □ □ □ □ □ □ □ □ □ □ □ □     ತತ್ಸಮ - - - -  - - - - - - - - - ತದ್ಭವ (ಸಂಸ್ಕೃತ )                    (ಕನ್ನಡ ) ■ ನರ್ತಕಿ - ನಚ್ಚಣಿ ■ ಲಕ್ಷ್ಮಿ - ಲಕ್ಕಿ ,ಲಕುಮಿ ■ವೇಷ - ವೇಸ ■ಲೇಪ - ಲಪ್ಪ ■ವರ್ಧಮಾನ - ಬದ್ದವಣ ■ವಜ್ರ - ಬಜ್ಜರ ■ವತ್ಸಲಾ - ಬಚ್ಚಳೆ ■ವಿಸ್ತಾರ - ಬಿತ್ತರ ■ವೃದ್ಧ - ವಡ್ಡ ■ವೃದ್ಧಿ - ಬಡ್ಡಿ ■ವ್ಯಾಖ್ಯಾನ - ವಕ್ಕಣೆ ■ವ್ಯಾಘ್ರ - ಬಗ್ಗ ■ವರ್ಧಕಿ - ಬಡಗಿ ■ವಿದ್ಯೆ - ಬಿಜ್ಜೆ ■ವೈದ್ಯ - ಬೆಜ್ಜ ■ವಿಜ್ಞಾನ - ಬಿನ್ನಣ ■ಶಿಲ್ಪಕ,ಶಿಲ್ಪಿ - ಸಿಂಪಿಗ ,ಚಿಪ್ಪಿಗ ■ಶೂನ್ಯ - ಸೊನ್ನೆ ■ಅವಸ್ಥೆ - ಅವತೆ ■ಅರ್ಹ - ಅರುಹ ■ಅರ್ಗಲ,ಅರ್ಗಲೆ - ಅಗಳಿ,ಅಗುಳಿ (ಚಿಲಕ) ■ಅಂಗುಷ್ಠ - ಅಂಗುಟ ,ಉಂಗುಟ. ■ಆಲಸ್ಯ - ಆಲಸ ■ಆಜ್ಞಾ, ಆಜ್ಞೆ - ಆಣೆ ■ಕ್ರಕಚ - ಗರಗಸ ■ಕ್ಷಣ - ಚಣ ■ಗ್ರಹ - ಗರ ■ಗ್ರಹಣ - ಗರಣ ■ಗ್ರಾಮೀಣ - ಗಾವಿಲ ■ಲಕ್ಷ - ಲಕ್ಕ ■ ಶ್ರೇಷ್ಠಿ -...