Thursday 30 November 2017

Kannada subhashitagalu/Kannada nudimuttugalu ಸುಭಾಷಿತಗಳು ಕನ್ನಡ ಸುಭಾಷಿತಗಳು ಕನ್ನಡ ನುಡಿಮುತ್ತುಗಳು

1. ಹಸಿದವರಿಗೆ ನಮ್ಮಿಂದ ಊಟ ಹಾಕಲು ಆಗದಿದ್ದಾಗ, ಊಟ ಹಾಕುವವರ ಮನೆಯನ್ನಾದರೂ ತೋರಿಸಬೇಕು.............................ಗಳಗನಾಥ.
2. ಸದ್ಗುಣ ಮತ್ತು ದುರ್ಗುಣಗಳ ವ್ಯತ್ಯಾಸ ತಿಳಿಯದಾದಾಗ ನಮ್ಮ ಬೆಳವಣಿಗೆ ನಿಲ್ಲುತ್ತದೆ. -------- ಮಹಾತ್ಮಾ ಗಾಂಧಿ.
3. ಹೆಚ್ಚು ಕಷ್ಟ ಪಟ್ಟು ದುಡಿದಷ್ಟೂ ಅದೃಷ್ಟ ಹೆಚ್ಚಾಗಿ ನಿಮ್ಮನ್ನು ಒಲಿಯುತ್ತದೆ. -------ಥಾಮಸ್ ಜಫರ್ಸನ್.
4. ಶಾಲೆಯಲ್ಲಿ ಕಲಿತದ್ದು ಮರೆತ ಬಳಿಕವೂ ನೆನಪಲ್ಲಿ ಉಳಿಯುವುದೇ ಶಿಕ್ಷಣ. ------ ಆಲ್ಬರ್ಟ್ ಐನ್ ಸ್ಟೀನ್.
5. ಬಹಳಷ್ಟು ಜನರಿಗೆ ಸ್ವಾತಂತ್ರ್ಯ ಬೇಕಿಲ್ಲ. ಏಕೆಂದರೆ ಸ್ವಾತಂತ್ರ್ಯದ ಜತೆಗೆ ಜವಾಬ್ದಾರಿಯು ಇರುತ್ತದೆ. ಬಹಳಷ್ಟು ಜನ ಜವಾಬ್ದಾರಿಯ ಬಗ್ಗೆ ಭಯ ಹೊಂದಿದ್ದಾರೆ. ------- ಸಿಗ್ಮಂಡ್ ಫ್ರಾಯ್ಡ್.
6. ಮುಗ್ಧರ ನಂಬಿಕೆಯೇ ಮೋಸಗಾರರ ಬಲವಾದ ಆಯುಧ. ----------ಸ್ಟೀಫನ್ ಕಿಂಗ್.
7. ಮಹತ್ವಾಕಾಂಕ್ಷೆ ಇಲ್ಲದ ಬುದ್ಧಿವಂತಿಕೆ ರೆಕ್ಕೆಗಳಿಲ್ಲದ ಹಕ್ಕಿಯಂತೆ. ------ಸಾಲ್ವಡೋರ್ ಡಾಲಿ.
8. ದುಃಖದ ಮೌನ ಭಾಷೆಯೇ ಕಣ್ಣೀರು. ------ವಾಲ್ಟೇರ್.
9. ಯಶಸ್ಸು ಸದಾ ಇರಬೇಕೆಂದರೆ ವಿನಯದಿಂದಿರಿ. ಕೀರ್ತಿ ಅಥವಾ ಹಣ ತಲೆಗೆ ಹತ್ತದಂತೆ ನೋಡಿಕೊಳ್ಳಿ. ------'ಎ.ಆರ್.ರೆಹಮಾನ್.
10. ನಿಷ್ಪ್ರಯೋಜಕ ವ್ಯಕ್ತಿ ಗಳು ಕೇವಲ ತಿನ್ನುವುದಕ್ಕಾಗಿ ಮತ್ತು ಕುಡಿಯುವುದಕ್ಕಾಗಿ ಬದುಕುತ್ತಾರೆ. ಪ್ರಯೋಜನಕಾರಿ ವ್ಯಕ್ತಿ ಗಳು ಬದುಕುವುದಕ್ಕಾಗಿ ತಿನ್ನುತ್ತಾರೆ ಮತ್ತು ಕುಡಿಯುತ್ತಾರೆ. ------- ಸಾಕ್ರೆಟಿಸ್.
11. ಕ್ರೀಡೆಯಲ್ಲಿ ಕೆಲವೊಮ್ಮೆ ನೀವು ಅಪಾಯಗಳನ್ನು ಆಹ್ವಾನಿಸಲೇಬೇಕು. ಆದರೆ ವಾಸ್ತವದ ಅಪಾಯಗಳನ್ನು ಎದುರಿಸಿ, ಹುಚ್ಚು ಅಪಾಯಗಳನ್ನಲ್ಲ. ----ಸರ್ಗಿ ಬುಬ್ಕಾ.
12. ಶಿಕ್ಷಣ ಎನ್ನುವುದು ಅತ್ಯಂತ ಶಕ್ತಿಶಾಲಿ ಆಯುಧ. ಅದರ ಮೂಲಕ ಜಗತ್ತನ್ನು ಬದಲಿಸಬಹುದು. ------'ನೆಲ್ಸನ್ ಮಂಡೇಲಾ.
13. ಬೆಂಕಿಯಿಲ್ಲದೆ ಮೇಣದ ಬತ್ತಿ ಉರಿಯುವುದಿಲ್ಲ. ಹಾಗೆಯೇ ಆಧ್ಯಾತ್ಮಿಕ ಜೀವನವಿಲ್ಲದೆ ಮನುಷ್ಯ ಬದುಕಲಾರ. -----ಗೌತಮ ಬುದ್ಧ.
14. ಜೀವನದ ಭಯದಿಂದಲೇ ಸಾವಿನ ಭಯವೂ ಹುಟ್ಟುವುದು. ಜೀವನವನ್ನು ಸಂಪೂರ್ಣವಾಗಿ ಜೀವಿಸುವವನು ಸಾಯಲು ಸದಾ ಸಿದ್ಧನಾಗಿರುತ್ತಾನೆ. -----ಮಾರ್ಕ್ ಟ್ವೈನ್.
15. ಈ ಜಗತ್ತೆನ್ನುವುದು ನಮ್ಮನ್ನು ನಾವು ಗಟ್ಟಿಗೊಳಿಸಲೆಂದೇ ಇರುವ ವ್ಯಾಯಾಮ ಶಾಲೆ.----- ಸ್ವಾಮಿ ವಿವೇಕಾನಂದ 

No comments:

Post a Comment

Specialty in Kannada.. firsts in Kannada

 ಕನ್ನಡದ ವಿಶಿಷ್ಟ ಹಾಗೂ ವೈವಿಧ್ಯಮಯ ಸಂಗತಿಗಳು