Skip to main content

simple beauty tips ಸರಳ ಸೌಂದರ್ಯ ಸಲಹೆಗಳು

ಸೌತೆಕಾಯಿ ತುರಿದಿಡಿ.ಅದಕ್ಕೆ ಗುಲಾಬಿ ಜಲ ಸೇರಿಸಿ ಪೇಸ್ಟ್ ಮಾಡಿಕೊಳ್ಳಿ. ಈ ಪೇಸ್ಟ್ಅನ್ನು ಕಪ್ಪು ಕಲೆಗಳ ಮೇಲೆ ಹಚ್ಚುವುದರಿಂದ ಆ ಭಾಗ ತಿಳಿಯಾಗುತ್ತದೆ.ಜೊತೆಗೆ ಸುಸ್ತಾದ ಕಕಣ್ಣುಗಳಿಗೆ ಉತ್ತಮ ವಿಶ್ರಾಂತಿಯು ದೊರೆಯುತ್ತದೆ.

ತುರಿದ ಶುಂಠಿಗೆ ಜೇನುತುಪ್ಪ ಮತ್ತು ಗುಲಾಬಿ ಜಲ ಬೆರೆಸಿ ಪೇಸ್ಟ್ ತಯಾರಿಸಿಕೊಳ್ಳಿ. ಈ ಪೇಸ್ಟ್ ಅನ್ನು ಪ್ರತಿದಿನ ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿನ ಕಲೆ ಹಾಗು ಸುಕ್ಕುಗಳು ಕಡಿಮೆಯಾಗುತ್ತವೆ.

■2 ಚಮಚ  ಜೇನುತುಪ್ಪ , 1 ಚಮಚ ನಿಂಬೆರಸ ಸ್ವಲ್ಪ ಗುಲಾಬಿ ಜಲ ಸೇರಿಸಿ ಪೇಸ್ಟ್ ಮಾಡಿಡಿ. ಪ್ರತಿದಿನ ಬೆಳಿಗ್ಗೆ ಅದನ್ನು ಮುಖಕ್ಕೆ ಹಚ್ಚಿ ಅದು ಒಣಗಿದ ನಂತರ ತಣ್ಣನೆಯ ನೀರಿನಿಂದ ತೊಳೆಯಿರಿ. ಕೆಲವು ದಿನಗಳ ನಂತರ ನಿಂಬೆರಸಕ್ಕೆ ಬದಲಾಗಿ ಮೊಸರನ್ನ ಬಳಸಿ  ಪೇಸ್ಟ್ ಮಾಡಿಕೊಂಡು ಹಚ್ಚಿಕೊಳ್ಳಿ. 15-20  ನಿಮಿಷಗಳ ನಂತರ ಮುಖ ತೊಳೆಯಿರಿ. ಇದು ಡ್ರೈ ಸ್ಕಿನ್ ಇರುವವರಿಗೆ ಅತ್ಯುತ್ತಮ ಫೇಸ್ ಫ್ಯಾಕ್ ಆಗಿ ಕೆಲಸ ಮಾಡುತ್ತದೆ.

ಸೌತೆಕಾಯಿಯ ಸಿಪ್ಪೆ ತೆಗೆದು ಹೋಳು ಮಾಡಿ ತುರಿದುಕೊಳ್ಳಿ.ಅದಕ್ಕೆ ಕ್ಯಾರೆಟ್ ತುರಿ ಸೇರಿಸಿ ಮತ್ತು ಸ್ವಲ್ಪ ನಿಂಬೆರಸ ಸೇರಿಸಿ ಮುಖದಲ್ಲಿ ಕಪ್ಪುಕಲೆಗಳಿರುವ ಕಡೆ ದಿನಕ್ಕೆ ಮೂರರಿಂದ ನಾಲ್ಕು ಬಾರಿ ಹಚ್ಚಿ..ರಾತ್ರಿ ಸಮಯದಲ್ಲಿ ತಪ್ಪದೇ ಈ ಮಿಶ್ರಣವನ್ನು  ಮುಖಕ್ಕೆ ಹಚ್ಚಿಕೊಂಡು ಮಲಗಿ ಬೆಳಿಗ್ಗೆ ತಣ್ಣನೆಯ ನೀರಿನಿಂದ ಮುಖ ತೊಳೆದರೆ ಮುಖದ ಕಪ್ಪು ಕಲೆ ಹಾಗೂ ಕಣ್ಣಿನ ಕಪ್ಪು ವೃತ್ತ ಒಂದೇ ವಾರದಲ್ಲಿ ಕಡಿಮೆಯಾಗುತ್ತದೆ.


ಒಂದು ಚಮಚ ಟೊಮೆಟೊ ಪೇಸ್ಟ್ ಅರ್ಧ ಚಮಚ ಕಿತ್ತಳೆಹಣ್ಣಿನ ರಸ, 2 ಚಿಟಕಿ ಅರಿಶಿನ ಮತ್ತು ಒಂದು  ಚಮಚ ಕಡಲೆ ಹಿಟ್ಟು ಸೇರಿಸಿ ಪೇಸ್ಟ್ ತಯಾರಿಸಿಕೊಳ್ಳಿ. ಈ ಪೇಸ್ಟ್ ಅನ್ನು  ಮುಖ,ಕೈ.ಕಾಲು ಎಲ್ಲೆಲ್ಲಿ ಕಪ್ಪು ಕಲೆಗಳಿರುವುದೋ ಅಲ್ಲಿ ಹಚ್ಚಿ 10  ನಿಮಿಷ ಒಣಗಲು ಬಿಡಿ.ನಂತರ ತಣ್ಣೀರಿನಿಂದ ತೊಳೆಯಿರಿ. ಈ ರೀತಿ ಪ್ರತಿದಿನ ಮಾಡುವುದರಿಂದ ಕಪ್ಪು ಕಲೆಗಳು ಕ್ರಮೇಣ ಕಡಿಮೆಯಾಗುತ್ತದೆ.




Comments

Popular posts from this blog

ಸವರ್ಣ ದೀರ್ಘ ಸಂಧಿ. ಸವರ್ಣ ದೀರ್ಘ ಸಂಧಿ ಉದಾಹರಣೆಗಳು savarna dhirgha sandhi. Savarna dhirgha sandhi examples

ಸವರ್ಣ ದೀರ್ಘ ಸಂಧಿ. [ ] ಪೂರ್ವ ಪದದ ಅಂತ್ಯ ಸ್ವರ ಮತ್ತು ಉತ್ತರ ಪದದ ಆರಂಭದ ಸ್ವರ ಒಂದೇ ರೀತಿಯ ವರ್ಣವಾಗಿದ್ದರೆ , ಸಂಧಿಕಾರ್ಯ ನಡೆಯುವಾಗ ಅದೇ ಸ್ವರದ ದೀರ್ಘ ಸ್ವರವು ಆದೇಶವಾಗಿರುವುದು ಕಂಡು ಬರುತ್ತದೆ. [ ] ಸಂಧಿಕಾರ್ಯ ನಡೆಯುವಾಗ ಒಂದೇ ರೀತಿಯ ಸ್ವರಾಕ್ಷರಗಳು ಪರಸ್ಪರ ಸೇರಿ ದೀರ್ಘ ಸ್ವರ ಆದೇಶವಾದರೆ ಅಂತಹ ಸಂಧಿಯನ್ನು "ಸವರ್ಣ ದೀರ್ಘ ಸಂಧಿ "ಎಂದು ಕರೆಯುತ್ತಾರೆ. [ ] ಸವರ್ಣಾಕ್ಷರಗಳಿಗೆ ಸವರ್ಣಾಕ್ಷರಗಳ ಪರವಾಗಿ ಸವರ್ಣ ದೀರ್ಘಾಕ್ಷರಗಳು ಬಂದರೆ ಸವರ್ಣ ದೀರ್ಘ ಸಂಧಿ. [ ] ಉದಾಹರಣೆಗೆ ಪೂರ್ವ ಪದ + ಉತ್ತರ ಪದ = ಸಂಧಿಪದ 1. ರವಿ + ಇಂದ್ರ = ರವೀಂದ್ರ ( ಇ+ಇ= ಈ) 2. ದೇವ+ ಆಲಯ= ದೇವಾಲಯ. (ಅ+ಆ=ಆ) 3. ಗುರು+ ಉಪದೇಶ =ಗುರೂಪದೇಶ (ಉ+ಉ=ಊ) 4. ಮಹಾ+ ಆತ್ಮ = ಮಹಾತ್ಮ (ಆ+ಆ=ಆ) 5. ಗಿರಿ+ ಇಂದ್ರ = ಗಿರೀಂದ್ರ 6. ಮುನಿ+ ಇಂದ್ರ =ಮುನೀಂದ್ರ. 7. ಅಲ್ಪ + ಅಕ್ಷರ =ಅಲ್ಪಾಕ್ಷರ. 8. ವಿದ್ಯ+ ಅರ್ಜನೆ=ವಿದ್ಯಾರ್ಜನೆ. 9. ರಾಕ್ಷಸ + ಅಧಿಪತಿ= ರಾಕ್ಷಸಾಧಿಪತಿ. 10. ಸೀತ+ಅನ್ವೇಷಣೆ= ಸೀತಾನ್ವೇಷಣೆ. 11. ಪಂಚ+ಆಸ್ಯ=ಪಂಚಾಸ್ಯ. 12. ಶಾಸಕ+ಅಂಗ=ಶಾಸಕಾಂಗ. 13. ಅಭಯ+ಅರಣ್ಯ =ಅಭಯಾರಣ್ಯ. 14. ಉಭಯ+ಅರಣ್ಯ =ಉಭಯಾರಣ್ಯ 15. ವಸ್ರ್ತ + ಆಭರಣ= ವಸ್ತ್ರಾಭರಣ. 16. ಗೌರಿ+ಈಶ =ಗೌರೀಶ. 17. ಕಟು+ಉಕ್ತಿ=ಕಟೂಕ್ತಿ. 18. ಕೃಷ್ಣ +ಅಜಿನ=ಕೃಷ್ಣಾಜಿನ. 19. ಪೀತ+ಅಂಬರ=ಪೀತಾಂಬರ. 20. ಏಕ+ಆಸ...

ಡಾ.ಸತ್ಯಾನಂದ ಪಾತ್ರೋಟ Dr.satyananda patrota

• ಡಾ.ಸತ್ಯಾನಂದ ಪಾತ್ರೋಟ • ಜನನ- ಬಾಗಲಕೋಟೆ • ವಿದ್ಯಾಭ್ಯಾಸ ~ಎಂ.ಎ., ಪಿ.ಎಚ್.ಡಿ. • ಉದ್ಯೋಗ ~ ಬಾಗಲಕೋಟೆಯ ಎಸ್.ಬಿ.ಪಾಟೀಲ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಅಧ್ಯಾಪಕರು. • ಕವನ ಸಂಕಲನಗಳು 1. ಕರಿನೆಲದ ಕಲೆಗಳು 2. ಜಾಜಿ ಮಲ್ಲಿಗೆ 3. ಕಲ್ಲಿಗೂ ಗೊತ್ತಿರುವ ಕಥೆ. 4. ಕರಿಯ ಕಟ್ಟಿದ ಕವನ 5. ನನ್ನ ಕನಸಿನ ಹುಡುಗಿ 6. ನದಿಗೊಂದು ಕನಸು ಮತ್ತು ಅವಳು ನಾಟಕಗಳು 1. ನಮಗ ಯಾರು ಇಲ್ಲೋ ಎಪ್ಪಾ ಸಾಕ್ಷಿ 2. ಮತ್ತೊಬ್ಬ ಏಕಲವ್ಯ ಪ್ರಬಂಧ ಸಂಕಲನ 1. ಒಂದಿಷ್ಟು ಕ್ಷಣಗಳು ಕಾವ್ಯದ ಧ್ವನಿಸುರುಳಿ 1. ಎದೆಯ ಮಾತು ಪ್ರಶಸ್ತಿ- ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Kannada grammar for kpsc exams ಕೆ.ಪಿ.ಎಸ್. ಸಿ.ಪರೀಕ್ಷೆಗಳಿಗೆ ಕನ್ನಡ ವ್ಯಾಕರಣ

 ಕೆ.ಪಿ.ಎಸ್. ಸಿ ನಡೆಸುವ ಪ್ರತಿಯೊಂದು ಪರೀಕ್ಷೆಗಳಲ್ಲಿ ಕನ್ನಡಕ್ಕೆ ಸಂಬಂಧಪಟ್ಟಂತೆ 35 ಅಂಕಗಳನ್ನು ನಿಗದಿಪಡಿಸಲಾಗಿದೆ. ಪರೀಕ್ಷೆಗೆ ಅನಕೂಲವಾಗಲೆಂದು  ಕನ್ನಡ ವ್ಯಾಕರಣಕ್ಕೆ ಸಂಬಂಧಪಟ್ಟ ಕೆಲವು ಮಾಹಿತಿ ಸಂಗ್ರಹಿಸಿ ಸ್ಪರ್ಧಾರ್ಥಿಗಳ ಅನುಕೂಲಕ್ಕಾಗಿ ನೀಡಲಾಗಿದೆ.ಆಸಕ್ತರು ಇದರ ಸದುಪಯೋಗ ಪಡೆಯಬಹುದು. □  □ □ □ □ □ □ □ □ □ □ □ □ □ □     ತತ್ಸಮ - - - -  - - - - - - - - - ತದ್ಭವ (ಸಂಸ್ಕೃತ )                    (ಕನ್ನಡ ) ■ ನರ್ತಕಿ - ನಚ್ಚಣಿ ■ ಲಕ್ಷ್ಮಿ - ಲಕ್ಕಿ ,ಲಕುಮಿ ■ವೇಷ - ವೇಸ ■ಲೇಪ - ಲಪ್ಪ ■ವರ್ಧಮಾನ - ಬದ್ದವಣ ■ವಜ್ರ - ಬಜ್ಜರ ■ವತ್ಸಲಾ - ಬಚ್ಚಳೆ ■ವಿಸ್ತಾರ - ಬಿತ್ತರ ■ವೃದ್ಧ - ವಡ್ಡ ■ವೃದ್ಧಿ - ಬಡ್ಡಿ ■ವ್ಯಾಖ್ಯಾನ - ವಕ್ಕಣೆ ■ವ್ಯಾಘ್ರ - ಬಗ್ಗ ■ವರ್ಧಕಿ - ಬಡಗಿ ■ವಿದ್ಯೆ - ಬಿಜ್ಜೆ ■ವೈದ್ಯ - ಬೆಜ್ಜ ■ವಿಜ್ಞಾನ - ಬಿನ್ನಣ ■ಶಿಲ್ಪಕ,ಶಿಲ್ಪಿ - ಸಿಂಪಿಗ ,ಚಿಪ್ಪಿಗ ■ಶೂನ್ಯ - ಸೊನ್ನೆ ■ಅವಸ್ಥೆ - ಅವತೆ ■ಅರ್ಹ - ಅರುಹ ■ಅರ್ಗಲ,ಅರ್ಗಲೆ - ಅಗಳಿ,ಅಗುಳಿ (ಚಿಲಕ) ■ಅಂಗುಷ್ಠ - ಅಂಗುಟ ,ಉಂಗುಟ. ■ಆಲಸ್ಯ - ಆಲಸ ■ಆಜ್ಞಾ, ಆಜ್ಞೆ - ಆಣೆ ■ಕ್ರಕಚ - ಗರಗಸ ■ಕ್ಷಣ - ಚಣ ■ಗ್ರಹ - ಗರ ■ಗ್ರಹಣ - ಗರಣ ■ಗ್ರಾಮೀಣ - ಗಾವಿಲ ■ಲಕ್ಷ - ಲಕ್ಕ ■ ಶ್ರೇಷ್ಠಿ -...