Friday 22 December 2017

ಕನ್ನಡ ಸುಭಾಷಿತಗಳು ಕನ್ನಡ ನುಡಿಮುತ್ತು ಗಳು

ಉತ್ತಮ ಗುರು ತನ್ನ ಶಿಷ್ಯರಿಂದಲೇ ಕಂಡು ಹಿಡಿಯಲ್ಪಡುತ್ತಾನೆ. ಯಾವ ಶಿಷ್ಯ ಗುರುವಿಗಿಂತ ಮುಂದೆ ಹೋಗುತ್ತಾನೋ ಅವನೇ ಉತ್ತಮ ಗುರು.
— ವಿನೋಬಾ ಭಾವೆ

ಹಸಿವು ಒಂದು ರೋಗ ಎಂದು ತಿಳಿದುಕೋ. ಭಿಕ್ಷೆ ದೊರಕಿದುದನ್ನು ಔಷಢ ಎಂದು ಸೇವಿಸು. ಸಿಹಿಯನ್ನು ಬೇಡದಿರು. ದೊರೆತುದುದನ್ನು ಸೇವಿಸು. ರೋಗಕ್ಕೆ ಎಷ್ಟು ಪ್ರಮಾಣದ ಔಷಧ ಬೇಕೋ ಅಷ್ಟೇ ಆಹಾರ ಸೇವಿಸು. ಹೆಚ್ಚಲ್ಲ ಕಡಿಮೆಯಲ್ಲ.
— ಶಂಕರಾಚಾರ್ಯರು

"ನಾನು ಅವಧೂತನಾಗಿ ಹೋಗುವುದಿಲ್ಲ. ಕನ್ನಡವು ತನ್ನ ಸ್ಥಾನವನ್ನು ಅಧಿಕೃತವಾಗಿ ಪಡೆಯುವತನಕ, ನನ್ನ ಪ್ರಾಣವಿರುವತನಕ, ಕನ್ನಡಕ್ಕಾಗಿ ದುಡಿಯುವುದು, ಕನ್ನಡಕ್ಕಾಗಿ ವ್ಯಕ್ತಿಗಳನ್ನು ದುಡಿಯಲು ಪ್ರಚೋದಿಸುವುದು, ಅದಕ್ಕಾಗಿ ಭಗವಂತನಲ್ಲಿ ಮೊರೆಯಿಡುವುದು ಮಾಡುತ್ತೇನೆ. ನನ್ನೆಲ್ಲ ತಪಃಶಕ್ತಿಯನ್ನು ಅಥವಾ ಪ್ರಾರ್ಥನಾ ಶಕ್ತಿಯನ್ನು ಕನ್ನಡದ ಸೇವೆಗಾಗಿ ಮೀಸಲಿಡುತ್ತೇನೆ.... "

ಹಸಿವು ಒಂದು ರೋಗ ಎಂದು ತಿಳಿದುಕೋ. ಭಿಕ್ಷೆ ದೊರಕಿದುದನ್ನು ಔಷಢ ಎಂದು ಸೇವಿಸು. ಸಿಹಿಯನ್ನು ಬೇಡದಿರು. ದೊರೆತುದುದನ್ನು ಸೇವಿಸು. ರೋಗಕ್ಕೆ ಎಷ್ಟು ಪ್ರಮಾಣದ ಔಷಧ ಬೇಕೋ ಅಷ್ಟೇ ಆಹಾರ ಸೇವಿಸು. ಹೆಚ್ಚಲ್ಲ ಕಡಿಮೆಯಲ್ಲ.
— ಶಂಕರಾಚಾರ್ಯರು

ಭುಕ್ತಿಪಥ ಮುಕ್ತಿಪಥ ಬೇರೆಬೇರೆಯವಲ್ಲ |
ಯುಕ್ತದಿಂದೆರಡುಮಂಚುಗಳೊಂದೆ ಪಥಕೆ ||
ಸತ್ತ್ವಶೋಧನೆ ಲೋಕಸಂಸ್ಕಾರದಿಂ ನಿನಗೆ |
ಶಕ್ತಿಯಧ್ಯಾತ್ಮಕದು -- ಮಂಕುತಿಮ್ಮ ||
— ಡಿ ವಿ ಜಿ

No comments:

Post a Comment

Specialty in Kannada.. firsts in Kannada

 ಕನ್ನಡದ ವಿಶಿಷ್ಟ ಹಾಗೂ ವೈವಿಧ್ಯಮಯ ಸಂಗತಿಗಳು