Skip to main content

ಕನ್ನಡ ಸುಭಾಷಿತಗಳು ಕನ್ನಡ ನುಡಿಮುತ್ತು ಗಳು Kannada subhashitagalu Kannada nudi

1. ಆದರ್ಶ ಗೃಹಸ್ಥನಾಗುವುದು , ಆದರ್ಶ ಸನ್ಯಾಸಿಯಾಗುವುದಕ್ಕಿಂತ ಬಹಳ ಕಷ್ಟ. ---- ಸ್ವಾಮಿ ವಿವೇಕಾನಂದ.
2. ಕಷ್ಟಗಳು ಹೆಚ್ಚಾದಂತೆ ಬುದ್ಧಿ ಚುರುಕಾಗಿ ಕೆಲಸ ಮಾಡುತ್ತದೆ. -----ಎಮರ್ಸನ್.
3. ಪ್ರೀತಿಯಿಂದಾಡಿದ ಪ್ರತಿಯೊಂದು ನುಡಿಯು ಸಿಡಿಲಿನಂತೆ ಪರಿಣಾಮಕಾರಿ. -------ಸ್ವಾಮಿ ವಿವೇಕಾನಂದ.
4. ಗಟ್ಟಿ ಯಾವುದು , ಜಳ್ಳು ಯಾವುದು ಎಂಬುದನ್ನು ತಿಳಿದು ಶಾಶ್ವತವಾದ ಸತ್ಯವನ್ನು ಹುಡುಕುವುದು ನಮ್ಮ ಧರ್ಮವಾಗಬೇಕು.-----.ಬಿ.ಎಂ.ಶ್ರೀ.
5. ಜೀವನದಲ್ಲಿ ಬುದ್ಧಿವಂತಿಕೆಯೊಂದೇ ಸಾಲದು. ತಾಳ್ಮೆ ಮತ್ತು ವಿವೇಚನೆ ಕೂಡ ಮುಖ್ಯ. ----- ವಿನೋಬಾ ಭಾವೆ.
6. ವಿವೇಕವೆಂದರೆ ಬಿಡಿಸಿ ನೋಡುವುದು, ವಿಶ್ಲೇಷಿಸುವುದು , ತೂಗುವುದು , ಅಳೆಯುವುದು.---- ಗೋಪಾಲಕೃಷ್ಣ ಅಡಿಗ.
7. ನಿಮ್ಮಷ್ಟಕ್ಕೆ ನೀವೇ ಬೆಳೆಯಬೇಕು.ಅದಕ್ಕಾಗಿ ಬೇರೊಬ್ಬ ಶಿಕ್ಷಕನಿರುವುದಿಲ್ಲ.------ ಸ್ವಾಮಿ ವಿವೇಕಾನಂದ.
8. ಕಲಿಕೆ ವಿಷಯ ಬರೀ ತಿಳುವಳಿಕೆಯ ಮಟ್ಟದಲ್ಲಿ ಉಳಿಯದೆ ಹೆಚ್ಚು ಅರ್ಥಪೂರ್ಣ ಮಾಡಬಲ್ಲ ಮನುಷ್ಯನೊಬ್ಬ ಬೇಕು. ಆತನೇ ಕೋಚ್ ಅಥವಾ ಗುರು. ------ ಪಿ. ಲಂಕೇಶ್.
9. ಅನ್ಯರನ್ನು ಆಳು ಮಾಡದೆ, ತನ್ನ ತಾನಾಳಿದರೆ ಅದೇ ಬಿಡುಗಡೆ.----- ದ.ರಾ.ಬೇಂದ್ರೆ.
10. ಬಾಳುವಷ್ಟು ಕಾಲವೂ ಕಲಿಯುತ್ತಲೇ ಇರಬೇಕು.----- ತೀ.ನಂ.ಶ್ರೀ.
11. ನಾವು ಬಿಡುಗಡೆ, ಸ್ವಾತಂತ್ರ್ಯ ಪಡೆಯಬೇಕಾದದ್ದು ಅಜ್ಞಾನದಿಂದ, ಅಧರ್ಮದಿಂದ.---'.ಬಿ.ಎಂ.ಶ್ರೀ.
12. ನಮ್ಮ ಹಕ್ಕುಗಳಿಗಾಗಿ ಹೋರಾಡಲು ಎಲ್ಲಿ ಅವಕಾಶ ಇದೆಯೋ ಅಲ್ಲಿ ಪ್ರಜಾಪ್ರಭುತ್ವ ಇದೆ ಎಂದೇ ಅರ್ಥ. ------ ರೋಜರ್ ನಾಶ್ ಬಾಲ್ಡಿವಿನ್.
13. ಕರುಣೆ ಹೃದಯದ ಅಂತರಾಳದಿಂದ ಬರಬೇಕು. ಅದೇ ನಿಜವಾದ ಕರುಣೆ.-------ಮಹಾತ್ಮಾ ಗಾಂಧಿ.
14. ದೈವ ಸಹಾಯವಿಲ್ಲದೆ ಜಯವಿಲ್ಲ. ಸ್ವಪ್ರಯತ್ನವಿಲ್ಲದೆ ದೈವ ಸಹಾಯವೂ ಇಲ್ಲ.----- ಡಿ.ವಿ.ಜಿ.
15. ಕೆಟ್ಟದ್ದನ್ನು ಮಾಡಲೇಬೇಕೆಂದವನಿಗೆ ಅವಕಾಶದ ಕೊರತೆ ಇರದು.-------ಪಿ.ಸೈರಸ್
16. ಇನ್ನಬ್ಬರ ದುಃಖದಲ್ಲಿ ಸಂತೋಷ ಕಾಣಬೇಡ.------ಪಿ.ಸೈರಸ್.
17. ನಮ್ಮ ಹೆಚ್ಚಿನ ದುಃಖ, ಸಂಕಟಗಳಿಗೆ ನಾವೇ ಕಾರಣ.------ಸಾಫೋಕ್ಲಿಸ್.
18. ಧೈರ್ಯ ಅಂದರೆ ಭಯ ಇಲ್ಲದಿರುವುದಲ್ಲ, ಭಯದ ಮೇಲೆ ಜಯ ಸಾಧಿಸುವುದು.---- ನೆಲ್ಸನ್ ಮಂಡೇಲಾ.
19. ಮತ್ತೆ ಮತ್ತೆ ಯಾವ ಪುಸ್ತಕ ಓದುತ್ತೇವೆಯೋ ಅದು ಉತ್ತಮವಾದ ಪುಸ್ತಕ. ---------ಜಾನ್ ರಸ್ಕಿನ್.
20. ನಾವು ಮಾಡಿದ ಅಲ್ಪ ಸಾಧನೆ , ಮಾಡಬೇಕಾದ ಬೃಹತ್ ಕಾರ್ಯಕ್ಕೆ ನಮ್ಮನ್ನು ಕುರುಡಾಗಿಸಬಾರದು.-----ಎಸ್ . ರಾಧಾಕೃಷ್ಣನ್.
21. ಪ್ರೀತಿಯು ಒಡೆತನವನ್ನು ಪ್ರತಿಪಾದಿಸುವುದಿಲ್ಲ. ಸ್ವಾತಂತ್ರ್ಯವನ್ನು ನೀಡುತ್ತದೆ. ------- ರವೀಂದ್ರನಾಥ್ ಟ್ಯಾಗೋರ್.
22. ಭಕ್ತಿ ಒಳ್ಳೆಯ ಮಾತುಗಳನ್ನಾಡಿಸಿದರೆ ಸಾಲದು.ಅದು ಒಳ್ಳೆಯ ಕೆಲಸಗಳನ್ನು ಮಾಡಿಸಬೇಕು. ------ಡಿ.ವಿ.ಜಿ.
23. ದುಡಿಮೆಯು ಅತ್ಯಂತ ಹೆಚ್ಚು ಬೆಲೆಬಾಳುವ ಬಂಡವಾಳ. -------ಕಾರ್ಲ್ ಮಾರ್ಕ್ಸ್.
24. ಬಾಳು ಇರುವುದು ಬದುಕುವುದಕ್ಕಾಗಿ; ಬದುಕಿನಿಂದ ಬೆಳೆಯುವುದಕ್ಕಾಗಿ .--------ಶಿವರಾಮ ಕಾರಂತ.
25. ಧನವಿದ್ದವರೇ ಧನಿಕರಲ್ಲ, ಜ್ಞಾನವೇ ಧನದ ನಿಧಿ.------ಪಂಡಿತ ತಾರಾನಾಥ.
26. ವಿವೇಕಿಯಾದವನು ಬೇರೆಯವರ ತಪ್ಪನ್ನು ಕಂಡು ತನ್ನಲ್ಲಿರುವ ತಪ್ಪನ್ನು ತಿದ್ದಿಕೊಳ್ಳುತ್ತಾನೆ.-----ಸ್ವಾಮಿ ವಿವೇಕಾನಂದ.

Comments

Popular posts from this blog

ಸವರ್ಣ ದೀರ್ಘ ಸಂಧಿ. ಸವರ್ಣ ದೀರ್ಘ ಸಂಧಿ ಉದಾಹರಣೆಗಳು savarna dhirgha sandhi. Savarna dhirgha sandhi examples

ಸವರ್ಣ ದೀರ್ಘ ಸಂಧಿ. [ ] ಪೂರ್ವ ಪದದ ಅಂತ್ಯ ಸ್ವರ ಮತ್ತು ಉತ್ತರ ಪದದ ಆರಂಭದ ಸ್ವರ ಒಂದೇ ರೀತಿಯ ವರ್ಣವಾಗಿದ್ದರೆ , ಸಂಧಿಕಾರ್ಯ ನಡೆಯುವಾಗ ಅದೇ ಸ್ವರದ ದೀರ್ಘ ಸ್ವರವು ಆದೇಶವಾಗಿರುವುದು ಕಂಡು ಬರುತ್ತದೆ. [ ] ಸಂಧಿಕಾರ್ಯ ನಡೆಯುವಾಗ ಒಂದೇ ರೀತಿಯ ಸ್ವರಾಕ್ಷರಗಳು ಪರಸ್ಪರ ಸೇರಿ ದೀರ್ಘ ಸ್ವರ ಆದೇಶವಾದರೆ ಅಂತಹ ಸಂಧಿಯನ್ನು "ಸವರ್ಣ ದೀರ್ಘ ಸಂಧಿ "ಎಂದು ಕರೆಯುತ್ತಾರೆ. [ ] ಸವರ್ಣಾಕ್ಷರಗಳಿಗೆ ಸವರ್ಣಾಕ್ಷರಗಳ ಪರವಾಗಿ ಸವರ್ಣ ದೀರ್ಘಾಕ್ಷರಗಳು ಬಂದರೆ ಸವರ್ಣ ದೀರ್ಘ ಸಂಧಿ. [ ] ಉದಾಹರಣೆಗೆ ಪೂರ್ವ ಪದ + ಉತ್ತರ ಪದ = ಸಂಧಿಪದ 1. ರವಿ + ಇಂದ್ರ = ರವೀಂದ್ರ ( ಇ+ಇ= ಈ) 2. ದೇವ+ ಆಲಯ= ದೇವಾಲಯ. (ಅ+ಆ=ಆ) 3. ಗುರು+ ಉಪದೇಶ =ಗುರೂಪದೇಶ (ಉ+ಉ=ಊ) 4. ಮಹಾ+ ಆತ್ಮ = ಮಹಾತ್ಮ (ಆ+ಆ=ಆ) 5. ಗಿರಿ+ ಇಂದ್ರ = ಗಿರೀಂದ್ರ 6. ಮುನಿ+ ಇಂದ್ರ =ಮುನೀಂದ್ರ. 7. ಅಲ್ಪ + ಅಕ್ಷರ =ಅಲ್ಪಾಕ್ಷರ. 8. ವಿದ್ಯ+ ಅರ್ಜನೆ=ವಿದ್ಯಾರ್ಜನೆ. 9. ರಾಕ್ಷಸ + ಅಧಿಪತಿ= ರಾಕ್ಷಸಾಧಿಪತಿ. 10. ಸೀತ+ಅನ್ವೇಷಣೆ= ಸೀತಾನ್ವೇಷಣೆ. 11. ಪಂಚ+ಆಸ್ಯ=ಪಂಚಾಸ್ಯ. 12. ಶಾಸಕ+ಅಂಗ=ಶಾಸಕಾಂಗ. 13. ಅಭಯ+ಅರಣ್ಯ =ಅಭಯಾರಣ್ಯ. 14. ಉಭಯ+ಅರಣ್ಯ =ಉಭಯಾರಣ್ಯ 15. ವಸ್ರ್ತ + ಆಭರಣ= ವಸ್ತ್ರಾಭರಣ. 16. ಗೌರಿ+ಈಶ =ಗೌರೀಶ. 17. ಕಟು+ಉಕ್ತಿ=ಕಟೂಕ್ತಿ. 18. ಕೃಷ್ಣ +ಅಜಿನ=ಕೃಷ್ಣಾಜಿನ. 19. ಪೀತ+ಅಂಬರ=ಪೀತಾಂಬರ. 20. ಏಕ+ಆಸ...

ಡಾ.ಸತ್ಯಾನಂದ ಪಾತ್ರೋಟ Dr.satyananda patrota

• ಡಾ.ಸತ್ಯಾನಂದ ಪಾತ್ರೋಟ • ಜನನ- ಬಾಗಲಕೋಟೆ • ವಿದ್ಯಾಭ್ಯಾಸ ~ಎಂ.ಎ., ಪಿ.ಎಚ್.ಡಿ. • ಉದ್ಯೋಗ ~ ಬಾಗಲಕೋಟೆಯ ಎಸ್.ಬಿ.ಪಾಟೀಲ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಅಧ್ಯಾಪಕರು. • ಕವನ ಸಂಕಲನಗಳು 1. ಕರಿನೆಲದ ಕಲೆಗಳು 2. ಜಾಜಿ ಮಲ್ಲಿಗೆ 3. ಕಲ್ಲಿಗೂ ಗೊತ್ತಿರುವ ಕಥೆ. 4. ಕರಿಯ ಕಟ್ಟಿದ ಕವನ 5. ನನ್ನ ಕನಸಿನ ಹುಡುಗಿ 6. ನದಿಗೊಂದು ಕನಸು ಮತ್ತು ಅವಳು ನಾಟಕಗಳು 1. ನಮಗ ಯಾರು ಇಲ್ಲೋ ಎಪ್ಪಾ ಸಾಕ್ಷಿ 2. ಮತ್ತೊಬ್ಬ ಏಕಲವ್ಯ ಪ್ರಬಂಧ ಸಂಕಲನ 1. ಒಂದಿಷ್ಟು ಕ್ಷಣಗಳು ಕಾವ್ಯದ ಧ್ವನಿಸುರುಳಿ 1. ಎದೆಯ ಮಾತು ಪ್ರಶಸ್ತಿ- ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Kannada grammar for kpsc exams ಕೆ.ಪಿ.ಎಸ್. ಸಿ.ಪರೀಕ್ಷೆಗಳಿಗೆ ಕನ್ನಡ ವ್ಯಾಕರಣ

 ಕೆ.ಪಿ.ಎಸ್. ಸಿ ನಡೆಸುವ ಪ್ರತಿಯೊಂದು ಪರೀಕ್ಷೆಗಳಲ್ಲಿ ಕನ್ನಡಕ್ಕೆ ಸಂಬಂಧಪಟ್ಟಂತೆ 35 ಅಂಕಗಳನ್ನು ನಿಗದಿಪಡಿಸಲಾಗಿದೆ. ಪರೀಕ್ಷೆಗೆ ಅನಕೂಲವಾಗಲೆಂದು  ಕನ್ನಡ ವ್ಯಾಕರಣಕ್ಕೆ ಸಂಬಂಧಪಟ್ಟ ಕೆಲವು ಮಾಹಿತಿ ಸಂಗ್ರಹಿಸಿ ಸ್ಪರ್ಧಾರ್ಥಿಗಳ ಅನುಕೂಲಕ್ಕಾಗಿ ನೀಡಲಾಗಿದೆ.ಆಸಕ್ತರು ಇದರ ಸದುಪಯೋಗ ಪಡೆಯಬಹುದು. □  □ □ □ □ □ □ □ □ □ □ □ □ □ □     ತತ್ಸಮ - - - -  - - - - - - - - - ತದ್ಭವ (ಸಂಸ್ಕೃತ )                    (ಕನ್ನಡ ) ■ ನರ್ತಕಿ - ನಚ್ಚಣಿ ■ ಲಕ್ಷ್ಮಿ - ಲಕ್ಕಿ ,ಲಕುಮಿ ■ವೇಷ - ವೇಸ ■ಲೇಪ - ಲಪ್ಪ ■ವರ್ಧಮಾನ - ಬದ್ದವಣ ■ವಜ್ರ - ಬಜ್ಜರ ■ವತ್ಸಲಾ - ಬಚ್ಚಳೆ ■ವಿಸ್ತಾರ - ಬಿತ್ತರ ■ವೃದ್ಧ - ವಡ್ಡ ■ವೃದ್ಧಿ - ಬಡ್ಡಿ ■ವ್ಯಾಖ್ಯಾನ - ವಕ್ಕಣೆ ■ವ್ಯಾಘ್ರ - ಬಗ್ಗ ■ವರ್ಧಕಿ - ಬಡಗಿ ■ವಿದ್ಯೆ - ಬಿಜ್ಜೆ ■ವೈದ್ಯ - ಬೆಜ್ಜ ■ವಿಜ್ಞಾನ - ಬಿನ್ನಣ ■ಶಿಲ್ಪಕ,ಶಿಲ್ಪಿ - ಸಿಂಪಿಗ ,ಚಿಪ್ಪಿಗ ■ಶೂನ್ಯ - ಸೊನ್ನೆ ■ಅವಸ್ಥೆ - ಅವತೆ ■ಅರ್ಹ - ಅರುಹ ■ಅರ್ಗಲ,ಅರ್ಗಲೆ - ಅಗಳಿ,ಅಗುಳಿ (ಚಿಲಕ) ■ಅಂಗುಷ್ಠ - ಅಂಗುಟ ,ಉಂಗುಟ. ■ಆಲಸ್ಯ - ಆಲಸ ■ಆಜ್ಞಾ, ಆಜ್ಞೆ - ಆಣೆ ■ಕ್ರಕಚ - ಗರಗಸ ■ಕ್ಷಣ - ಚಣ ■ಗ್ರಹ - ಗರ ■ಗ್ರಹಣ - ಗರಣ ■ಗ್ರಾಮೀಣ - ಗಾವಿಲ ■ಲಕ್ಷ - ಲಕ್ಕ ■ ಶ್ರೇಷ್ಠಿ -...