Skip to main content

ಕನ್ನಡ ಸುಭಾಷಿತಗಳು ಕನ್ನಡ ನುಡಿಮುತ್ತು ಗಳು Kannada subhashitagalu

ಒಳ್ಳೆಯ ಮಾತುಸಂಪಾದಿಸಿ

  • ಚೆನ್ನಾಗಿ ಆಡಿದ ಮಾತಿಗೆ ಸಂಸ್ಕೃತದಲ್ಲಿ ‘ಸುಭಾಷಿತ’ ಎನ್ನುತ್ತಾರೆ (ಸು:ಚೆನ್ನಾಗಿ, ಭಾಷಿತ:ಹೇಳಿದ್ದು). ‘ಚೆನ್ನಾಗಿ’ ಎಂದರೆ ಕೇಳುವುದಕ್ಕೆ ಇಂಪಾಗಿಯೋ, ಸುಂದರವಾದ ಪದಗಳನ್ನು ಪೋಣಿಸಿರುವುದೋ ಅಥವಾ ಆಕರ್ಷಕವಾಗಿಯೋ ಆಡಿದ್ದು. ಮತ್ತು ಬದುಕನ್ನು ಸಾರವನ್ನು ಸುಂದರವಾಗಿ, ಅರ್ಥಪೂರ್ಣವಾಗಿ ನೋಡಿ ಹೇಳಿದ ವಿವೇಕದ ವಚನ.
  • ಹೀಗಾಗಿಯೇ ಸಂಸ್ಕೃತದಲ್ಲಿ ‘ಸುಭಾಷಿತ’ ಎಂಬ ವಿಶಿಷ್ಟ ಸಾಹಿತ್ಯಪ್ರಕಾರವೇ ಅಪಾರವಾಗಿ ಬೆಳೆದಿದೆ. ಸುಭಾಷಿತಗಳ ಬಗ್ಗೆ ‘ಸುಭಾಷಿತರತ್ನಭಾಂಡಾಗಾರ’ದ ಮಾತೊಂದು ಹೀಗಿದೆ:
'ಭಾಷಾಸು ಮುಖ್ಯಾ ಮಧುರಾ ದಿವ್ಯಾ ಗೀರ್ವಾಣಭಾರತೀ /
ತಸ್ಮಾದ್ಧಿ ಕಾವ್ಯಂ ಮಧುರಂ ತಸ್ಮಾದಪಿ ಸುಭಾಷಿತಮ್‌//
  • ಭಾಷೆಯ ಬಗ್ಗೆ ಒಂದು ಸುಭಾಷಿತ; ಭಾಷೆಗಳಲ್ಲಿ ಮುಖ್ಯವೂ ಮಧುರವೂ ದಿವ್ಯವೂ ಆದುದು ಸಂಸ್ಕೃತಭಾಷೆ; ಅದರಿಂದಾಗಿ ಆ ಭಾಷೆಯಲ್ಲಿರುವ ಕಾವ್ಯ ಮಧರವಾಗಿದೆ; ಅದಕ್ಕಿಂತಲೂ ಸುಭಾಷಿತ ಇನ್ನೂ ಮಧುರ’ ಎನ್ನುವುದು ಈ ಶ್ಲೋಕದ ಭಾವ.
  • ನಮ್ಮ ಜೀವನವು ಮಾತನ್ನು ಆವಲಂಬಿಸಿಕೊಂಡಿದೆ; ನಮ್ಮ ಜೀವನ ಮಾತಿಲ್ಲದೆ ನಡೆಯದು. ನಮ್ಮ ಜೀವನದ ಸೊಗಸಿಗೂ, ಸುಖಕ್ಕೂ, ನೋವಿಗೂ ನಾವಾಡುವ ಮಾತು ಕಾರಣವಾಗಿರುತ್ತದೆ.


  • ನಾವಾಡುವ ಮಾತು ನಮ್ಮ ಬದುಕಿಗೆ ಪೂರಕವಾಗಿ ಒದಗಬೇಕು; ಬದುಕಿನ ಆಳವನ್ನೂ ವಿಸ್ತಾರವನ್ನೂ ಅದು ತೋರಿಸುವಂತಿರಬೇಕು; ನಮ್ಮ ಹಿತವನ್ನೂ ಅಹಿತವನ್ನೂ ಪ್ರಕಟಿಸುವಂತಿರಬೇಕು; ಇಷ್ಟೆಲ್ಲ ಇದ್ದರೂ ಆ ಮಾತು ಕೇಳಲು ಸಿಹಿಯಾಗಿರಲೂ ಬೇಕು. ಇಷ್ಟು ಗುಣಗಳನ್ನೂ ಒಳಗೊಂಡಿರುವುದೇ ‘ಸುಭಾಷಿತ’. ಇದನ್ನೇ ಸುಭಾಷಿತವೊಂದು ತನ್ನ ಬಗ್ಗೆ ತಾನೇ ಹೀಗೆ ಹೇಳಿಕೊಂಡಿದೆ:
ದ್ರಾಕ್ಷಾಮ್ಲಾನಾಮುಖೀ ಜಾತಾ ಶರ್ಕಾರಾ ಚಾಶ್ಮತಾಂ ಗತಾ/
ಸುಭಾಷಿತರಸಸ್ಯಾಗ್ರೇ ಸುಧಾ ಭೀತಾ ದಿವಂ ಗತಾ//
  • "ಸುಭಾಷಿತದ ರುಚಿಯ ಮುಂದೆ ದ್ರಾಕ್ಷಿಯೂ ಬಾಡಿಹೋಯಿತು(ಸಪ್ಪೆಯಾಯಿತು); ಸಕ್ಕರೆ ಕಲ್ಲಾಗಿಹೋಯಿತು (ರುಚಿಇಲ್ಲದ್ದು). ಅಮೃತವು ಹೆದರಿ ಸ್ವರ್ಗಕ್ಕೆ ಓಡಿಹೋಯಿತು!’

ಸುಭಾಷಿತದ ಶ್ರೇಷ್ಠತೆಸಂಪಾದಿಸಿ

  • ಸುಭಾಷಿತಗಳ ಸಂಗ್ರಹದಿಂದ ನಮ್ಮ ಜೀವನದೃಷ್ಟಿ ವಿಶಾಲವಾಗುವುದು; ಜೀವನದ ಎಷ್ಟೋ ಸಂದರ್ಭಗಳ ಗುಣಾವಗುಣಗಳನ್ನು ಸ್ಪಷ್ಟವಾಗಿ ವಿಮರ್ಶಿಸಲು ನೆರವಾಗುತ್ತವೆ; ಅದನ್ನೇ ಸುಭಾಷಿತವೊಂದು ಹೀಗೆಂದಿದೆ:
ಪೃಥಿವ್ಯಾಂ ತ್ರೀಣಿ ರತ್ನಾನಿ ಜಲಮನ್ನಂ ಸುಭಾಷಿತಂ/
ಮೂಢೈಃ ಪಾಷಾಣಖಂಡೇಷು ರತ್ನಸಂಜ್ಞಾ ವಿಧೀಯತೇ//
  • ‘ಭೂಮಿಯಲ್ಲಿ ಶ್ರೇಷ್ಠವಸ್ತುಗಳೆಂದರೆ ಕೇವಲ ಮೂರು: ನೀರು, ಅನ್ನ ಮತ್ತು ಒಳ್ಳೆಯ ಮಾತು. ಆದರೆ ಮೂರ್ಖರು ಕಲ್ಲಿನ ಚೂರುಗಳನ್ನು ‘‘ರತ್ನ ’’ಎಂದು ಕರೆಯುತ್ತಿರುವುದು ವಿಷಾದಕರ.’[೧]

ಧರ್ಮದ ಬಗೆಗೆ ಸುಭಾಷಿತಸಂಪಾದಿಸಿ

ಸತ್ಯಂ ಬ್ರೂಯಾತ ಪ್ರಿಯಂ ಬ್ರೂಯಾತ್|
ನಬ್ರೂಯಾತ್ ಸತ್ಯಮಪ್ರಿಯಂ||
ಪ್ರಿಯಂ ಚ ನಾSನೃತಂ ಬ್ರೂಯಾತ್|
ಏಷ ಧರ್ಮಃ ಸನಾತನಃ ||
  • ಸತ್ಯವನ್ನು ನುಡಿಯಬೇಕು, ಪ್ರಿಯವಾದ ಸತ್ಯವನ್ನು ಹೇಳಬೇಕು. ಅಪ್ರಿಯವಾದ, ಎಂದರೆ ಪರರ ಮನಸ್ಸಿಗೆ ಅಥವಾ ಪರರಿಗೆ ಕೆಡುಕಾಗಬಹುದಾದ ನೋವುಂಟು ಮಾಡುವ ಸತ್ಯವನ್ನು ಹೇಳಬೇಡ. ಬೇರೆಯವರಿಗೆ ಅಥವಾ ಇತರರಿಗೆ ಸಂತೋಷವಾಗುವುದೆಂದು ಅಥವಾ ಅನುಕೂಲವಾಗುವುದೆಂದು ಸುಳ್ಳನ್ನು ನುಡಿಯಬೇಡ. ಇದೇ ಸನಾತನವಾದ ಶಾಶ್ವತವಾದ ಬಹುಕಾಲದಿಂದ ಒಪ್ಪಿತವಾದ ಧರ್ಮ. [೨]

ವೇದವ್ಯಾಸರ ಧರ್ಮ ಸೂತ್ರಸಂಪಾದಿಸಿ


ವೇದ ವ್ಯಾಸ(ಸಮಕಾಲೀನ ಚಿತ್ರ)
1) ಶ್ಲೋಕಾರ್ಧೇನ ಪ್ರವಕ್ಷಾಮಿ,
ಯದುಕ್ತಂ ಗ್ರಂಥಕೋಟಿಭಿಃ |
ಪರೋಪಕಾರಃ ಪುಣ್ಯಾಯ,
ಪಾಪಾಯ ಪರಪೀಡನಂ ||
  • ಯಾರೋ ಒಬ್ಬ ಶಿಷ್ಯನು ವ್ಯಾಸರನ್ನು ಕುರಿತು, 18 ಪುರಾಣಗಳನ್ನೂ, ಶ್ರುತಿ ಸ್ಮøತಿಗಳನ್ನೆಲ್ಲಾ ಓದಿ ಧರ್ಮ ಸೂಕ್ಷ್ಮವನ್ನು ತಿಳಿಯುವುದು ಅಸಾಧ್ಯವೆಂದಾಗ, (ಒಂದೇ) ಅರ್ಧ ಶ್ಲೋಕದಲ್ಲಿ ಅವುಗಳೆಲ್ಲದರ ಸಾರಾಂಶವನ್ನೂ, ಧರ್ಮದ ಸಾರವನ್ನೂ ತಿಳಿಸುತ್ತೇನೆಂದು ಈ ಶ್ಲೋಕವನ್ನು ಹೇಳಿದರೆಂದು ಪ್ರತೀತಿ.
‘ಅರ್ಧ ಶ್ಲೋಕದಲ್ಲಿ ಕೋಟಿಗ್ರಂಥದಲ್ಲಿ ಹೇಳಿದುದನ್ನು ಹೇಳುತ್ತೇನೆ; ಪರೋಪಕಾರವೇ ಪುಣ್ಯ, ಪರ ಪೀಡನೆಯೇ ಪಾಪ’.
2) ಶ್ರೂಯತಾಂ ಧರ್ಮ ಸರ್ವಸ್ವಂ,
ಶ್ರುತ್ವಾಚ ಅವಧಾರ್ಯತಾಮ್ |
ಆತ್ಮನಃ ಪ್ರತಿಕೂಲಾನಿ
ನ ಪರೇಷಾಂ ಸಮಾಚರೇತ್ ||
  • ಎಲ್ಲಾ ಧರ್ಮ ಶಾಸ್ತ್ರ ಗಳನ್ನು ಓದಿದ್ದರೂ, ತಿಳಿದಿದ್ದರೂ, (ಕೇಳಿದ್ದರೂ, ಅದರಲ್ಲಿ ಏನೇ ಹೇಳಿದ್ದರೂ), ತನಗೂ, ಬೇರೆಯವರಿಗೂ ಕೆಡುಕಾಗವ ಕಾರ್ಯವನ್ನು ಮಾಡಬಾರದು. ಅಥವಾ ತನಗೆ ಯಾವುದು ಪ್ರತಿಕೂಲವೋ ಅಂಥದನ್ನು ಬೇರೆಯವರಿಗೆ-ಪರರಿಗೂ ಪ್ರತಿಕೂಲವೆಂದು ಅರಿತು, ಮಾಡಬಾರದು

ವ್ಯಾಸಭಾರತದ ಪ್ರತಿಜ್ಞೆಸಂಪಾದಿಸಿ

    • ಮಹಾಭಾರತದ ಆದಿಪರ್ವದ ಅಂಶಾವತರಣ ಪರ್ವವಾದ 62ನೆಯ ಅಧ್ಯಾಯದಲ್ಲಿ ಶ್ರೀ ಮಹಾಭಾರತದ ಪ್ರಶಂಸೆಂಯು ಬರುವುದು. ಆದರಲ್ಲಿ ವೈಶಂಪಾಯನ ಮುನಿಗಳು ಜನಮೇಜಯ ಮಹಾರಾಜನಿಗೆ ಮಹಾಭಾರತದ ಗುಣವರ್ಣನೆ ಮಾಡುತ್ತಾ, ಶ್ರೀ ಕೃಷ್ಣ ದ್ವೈಪಾಯನ ಮುನಿಯು ಅದ್ಭುತವಾದ ಈ ಮಹಾಭಾರತ ವ್ಯಾಖ್ಯಾನವನ್ನು ಮೂರವರ್ಷಗಳಲ್ಲಿ ರಚಿಸಿದನೆಂದು ಹೇಳಿದರು.
ವೈಶಂಪಾಯನ ಮುನಿ ಮಾಡಿದ ಕೊನಯ ಪ್ರಶಂಸೆಯು ಈರೀತಿ ಇದೆ:
ಧರ್ಮೇ-ಚಾರ್ಥೇ ಚ ಕಾಮೇ ಚ ಮೋಕ್ಷೇ ಚ ಭರತರ್ಷಭ |
ಯಧಿಹಾಸ್ತಿ ತದನ್ಯತ್ರ ಯನ್ನೇಹಾಸ್ತಿ ನ ತತ್ ಕ್ವಚಿತ್ ||64||
  • ಭರತಶ್ರೇಷ್ಠನೇ, ಧರ್ಮ, ಅರ್ಥ, ಕಾಮ ಮತು ಮೋಕ್ಷಗಳಿಗೆ ಸಂಬಂಧಿಸಿದ ಯಾವದೇ ವಿಷಯವು ಇದರಲ್ಲಿದ್ದರೆ ಮಾತ್ರ ಅದು ಬೇರೆ ಗ್ರಂಥಗಳಲ್ಲಿ ಸಿಗಬಹುದು. ಆದರೆ ಇದರಲ್ಲಿ ಯಾವುದು ಇಲ್ಲವೋ ಅದು ಬೇರೆಲ್ಲಿಯೂ ಸಿಗಲಾರದು. (ಮಹಾಭಾರತದ ಬಗ್ಗೆ ಈ ಶ್ಲೋಕವು ಬಹಳ ಪ್ರಸಿದ್ಧವಾಗಿದೆ)[೪]

ವಿದ್ಯೆಯಿಂದ ಸುಖಸಂಪಾದಿಸಿ

ವಿದ್ಯಾ ದಧಾತಿ ವಿನಯಂ, ವಿನಯಾದ್ಯಾತಿ ಪಾತ್ರತಾಂ|
ಪಾತ್ರತ್ವಾ ಧನಮಾಪ್ನೋತಿ, ಧನದ್ಧರ್ಮಂ ತತಃ ಸುಖಂ||
  • ವಿದ್ಯೆಯಿಂದ ವಿನಯಗುಣವು ಬರುವುದು. ವಿನಯಗುಣದಿಂದ ಸಮಾಜದಲ್ಲಿ ಯೋಗ್ಯತೆ, ಗೌರವ ಸಿಗುವುದು. ಅದರಿಂದ ಸಂಪತ್ತು ಗಳಿಕೆಯಾಗುವುದು. 






Comments

Post a Comment

Popular posts from this blog

ಸವರ್ಣ ದೀರ್ಘ ಸಂಧಿ. ಸವರ್ಣ ದೀರ್ಘ ಸಂಧಿ ಉದಾಹರಣೆಗಳು savarna dhirgha sandhi. Savarna dhirgha sandhi examples

ಸವರ್ಣ ದೀರ್ಘ ಸಂಧಿ. [ ] ಪೂರ್ವ ಪದದ ಅಂತ್ಯ ಸ್ವರ ಮತ್ತು ಉತ್ತರ ಪದದ ಆರಂಭದ ಸ್ವರ ಒಂದೇ ರೀತಿಯ ವರ್ಣವಾಗಿದ್ದರೆ , ಸಂಧಿಕಾರ್ಯ ನಡೆಯುವಾಗ ಅದೇ ಸ್ವರದ ದೀರ್ಘ ಸ್ವರವು ಆದೇಶವಾಗಿರುವುದು ಕಂಡು ಬರುತ್ತದೆ. [ ] ಸಂಧಿಕಾರ್ಯ ನಡೆಯುವಾಗ ಒಂದೇ ರೀತಿಯ ಸ್ವರಾಕ್ಷರಗಳು ಪರಸ್ಪರ ಸೇರಿ ದೀರ್ಘ ಸ್ವರ ಆದೇಶವಾದರೆ ಅಂತಹ ಸಂಧಿಯನ್ನು "ಸವರ್ಣ ದೀರ್ಘ ಸಂಧಿ "ಎಂದು ಕರೆಯುತ್ತಾರೆ. [ ] ಸವರ್ಣಾಕ್ಷರಗಳಿಗೆ ಸವರ್ಣಾಕ್ಷರಗಳ ಪರವಾಗಿ ಸವರ್ಣ ದೀರ್ಘಾಕ್ಷರಗಳು ಬಂದರೆ ಸವರ್ಣ ದೀರ್ಘ ಸಂಧಿ. [ ] ಉದಾಹರಣೆಗೆ ಪೂರ್ವ ಪದ + ಉತ್ತರ ಪದ = ಸಂಧಿಪದ 1. ರವಿ + ಇಂದ್ರ = ರವೀಂದ್ರ ( ಇ+ಇ= ಈ) 2. ದೇವ+ ಆಲಯ= ದೇವಾಲಯ. (ಅ+ಆ=ಆ) 3. ಗುರು+ ಉಪದೇಶ =ಗುರೂಪದೇಶ (ಉ+ಉ=ಊ) 4. ಮಹಾ+ ಆತ್ಮ = ಮಹಾತ್ಮ (ಆ+ಆ=ಆ) 5. ಗಿರಿ+ ಇಂದ್ರ = ಗಿರೀಂದ್ರ 6. ಮುನಿ+ ಇಂದ್ರ =ಮುನೀಂದ್ರ. 7. ಅಲ್ಪ + ಅಕ್ಷರ =ಅಲ್ಪಾಕ್ಷರ. 8. ವಿದ್ಯ+ ಅರ್ಜನೆ=ವಿದ್ಯಾರ್ಜನೆ. 9. ರಾಕ್ಷಸ + ಅಧಿಪತಿ= ರಾಕ್ಷಸಾಧಿಪತಿ. 10. ಸೀತ+ಅನ್ವೇಷಣೆ= ಸೀತಾನ್ವೇಷಣೆ. 11. ಪಂಚ+ಆಸ್ಯ=ಪಂಚಾಸ್ಯ. 12. ಶಾಸಕ+ಅಂಗ=ಶಾಸಕಾಂಗ. 13. ಅಭಯ+ಅರಣ್ಯ =ಅಭಯಾರಣ್ಯ. 14. ಉಭಯ+ಅರಣ್ಯ =ಉಭಯಾರಣ್ಯ 15. ವಸ್ರ್ತ + ಆಭರಣ= ವಸ್ತ್ರಾಭರಣ. 16. ಗೌರಿ+ಈಶ =ಗೌರೀಶ. 17. ಕಟು+ಉಕ್ತಿ=ಕಟೂಕ್ತಿ. 18. ಕೃಷ್ಣ +ಅಜಿನ=ಕೃಷ್ಣಾಜಿನ. 19. ಪೀತ+ಅಂಬರ=ಪೀತಾಂಬರ. 20. ಏಕ+ಆಸ...

ಡಾ.ಸತ್ಯಾನಂದ ಪಾತ್ರೋಟ Dr.satyananda patrota

• ಡಾ.ಸತ್ಯಾನಂದ ಪಾತ್ರೋಟ • ಜನನ- ಬಾಗಲಕೋಟೆ • ವಿದ್ಯಾಭ್ಯಾಸ ~ಎಂ.ಎ., ಪಿ.ಎಚ್.ಡಿ. • ಉದ್ಯೋಗ ~ ಬಾಗಲಕೋಟೆಯ ಎಸ್.ಬಿ.ಪಾಟೀಲ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಅಧ್ಯಾಪಕರು. • ಕವನ ಸಂಕಲನಗಳು 1. ಕರಿನೆಲದ ಕಲೆಗಳು 2. ಜಾಜಿ ಮಲ್ಲಿಗೆ 3. ಕಲ್ಲಿಗೂ ಗೊತ್ತಿರುವ ಕಥೆ. 4. ಕರಿಯ ಕಟ್ಟಿದ ಕವನ 5. ನನ್ನ ಕನಸಿನ ಹುಡುಗಿ 6. ನದಿಗೊಂದು ಕನಸು ಮತ್ತು ಅವಳು ನಾಟಕಗಳು 1. ನಮಗ ಯಾರು ಇಲ್ಲೋ ಎಪ್ಪಾ ಸಾಕ್ಷಿ 2. ಮತ್ತೊಬ್ಬ ಏಕಲವ್ಯ ಪ್ರಬಂಧ ಸಂಕಲನ 1. ಒಂದಿಷ್ಟು ಕ್ಷಣಗಳು ಕಾವ್ಯದ ಧ್ವನಿಸುರುಳಿ 1. ಎದೆಯ ಮಾತು ಪ್ರಶಸ್ತಿ- ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Kannada grammar for kpsc exams ಕೆ.ಪಿ.ಎಸ್. ಸಿ.ಪರೀಕ್ಷೆಗಳಿಗೆ ಕನ್ನಡ ವ್ಯಾಕರಣ

 ಕೆ.ಪಿ.ಎಸ್. ಸಿ ನಡೆಸುವ ಪ್ರತಿಯೊಂದು ಪರೀಕ್ಷೆಗಳಲ್ಲಿ ಕನ್ನಡಕ್ಕೆ ಸಂಬಂಧಪಟ್ಟಂತೆ 35 ಅಂಕಗಳನ್ನು ನಿಗದಿಪಡಿಸಲಾಗಿದೆ. ಪರೀಕ್ಷೆಗೆ ಅನಕೂಲವಾಗಲೆಂದು  ಕನ್ನಡ ವ್ಯಾಕರಣಕ್ಕೆ ಸಂಬಂಧಪಟ್ಟ ಕೆಲವು ಮಾಹಿತಿ ಸಂಗ್ರಹಿಸಿ ಸ್ಪರ್ಧಾರ್ಥಿಗಳ ಅನುಕೂಲಕ್ಕಾಗಿ ನೀಡಲಾಗಿದೆ.ಆಸಕ್ತರು ಇದರ ಸದುಪಯೋಗ ಪಡೆಯಬಹುದು. □  □ □ □ □ □ □ □ □ □ □ □ □ □ □     ತತ್ಸಮ - - - -  - - - - - - - - - ತದ್ಭವ (ಸಂಸ್ಕೃತ )                    (ಕನ್ನಡ ) ■ ನರ್ತಕಿ - ನಚ್ಚಣಿ ■ ಲಕ್ಷ್ಮಿ - ಲಕ್ಕಿ ,ಲಕುಮಿ ■ವೇಷ - ವೇಸ ■ಲೇಪ - ಲಪ್ಪ ■ವರ್ಧಮಾನ - ಬದ್ದವಣ ■ವಜ್ರ - ಬಜ್ಜರ ■ವತ್ಸಲಾ - ಬಚ್ಚಳೆ ■ವಿಸ್ತಾರ - ಬಿತ್ತರ ■ವೃದ್ಧ - ವಡ್ಡ ■ವೃದ್ಧಿ - ಬಡ್ಡಿ ■ವ್ಯಾಖ್ಯಾನ - ವಕ್ಕಣೆ ■ವ್ಯಾಘ್ರ - ಬಗ್ಗ ■ವರ್ಧಕಿ - ಬಡಗಿ ■ವಿದ್ಯೆ - ಬಿಜ್ಜೆ ■ವೈದ್ಯ - ಬೆಜ್ಜ ■ವಿಜ್ಞಾನ - ಬಿನ್ನಣ ■ಶಿಲ್ಪಕ,ಶಿಲ್ಪಿ - ಸಿಂಪಿಗ ,ಚಿಪ್ಪಿಗ ■ಶೂನ್ಯ - ಸೊನ್ನೆ ■ಅವಸ್ಥೆ - ಅವತೆ ■ಅರ್ಹ - ಅರುಹ ■ಅರ್ಗಲ,ಅರ್ಗಲೆ - ಅಗಳಿ,ಅಗುಳಿ (ಚಿಲಕ) ■ಅಂಗುಷ್ಠ - ಅಂಗುಟ ,ಉಂಗುಟ. ■ಆಲಸ್ಯ - ಆಲಸ ■ಆಜ್ಞಾ, ಆಜ್ಞೆ - ಆಣೆ ■ಕ್ರಕಚ - ಗರಗಸ ■ಕ್ಷಣ - ಚಣ ■ಗ್ರಹ - ಗರ ■ಗ್ರಹಣ - ಗರಣ ■ಗ್ರಾಮೀಣ - ಗಾವಿಲ ■ಲಕ್ಷ - ಲಕ್ಕ ■ ಶ್ರೇಷ್ಠಿ -...