1. ಮೈಸೂರಿನಲ್ಲಿ ಜವಾಬ್ದಾರಿ ಸರಕಾರಕ್ಕಾಗಿ ಕೆ.ಸಿ.ರೆಡ್ಡಿ ನಾಯಕತ್ವದಲ್ಲಿ ಚಳುವಳಿ ನಡೆಯಿತು.ಅದೇ ಅರಮನೆ ಸತ್ಯಾಗ್ರಹ-1947. 2. ಮೈಸೂರಿನ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ. ಮತ್ತು ರಾಜಪ್ರಮುಖರು ಜಯಚಾಮರಾಜ ಒಡೆಯರ್. 3. ಧಾರವಾಡದಲ್ಲಿ 1890 ರಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘವನ್ನು ಆರ್.ಹೆಚ್. ದೇಶಪಾಂಡೆ ಸ್ಥಾಪಿಸಿದರು. 4. ಆಲೂರು ವೆಂಕಟರಾಯರು ಕರ್ನಾಟಕದ ಸಭಾವನ್ನು ಧಾರವಾಡದಲ್ಲಿ 1916 ರಲ್ಲಿ ಸ್ಥಾಪಿಸಿದರು. 5. 1915 ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರಿನಲ್ಲಿ ಸ್ಥಾಪನೆಯಾಯಿತು. 6. ನಾಡಗೀತೆಯಾದ ಜಯಭಾರತ ಜನನಿಯ ತನುಜಾತೆ ಜಯ ಹೇ ಕರ್ನಾಟಕ ಮಾತೆಯನ್ನು ರಚಿಸಿದವರು ಕುವೆಂಪು. 7. 1920 ರಲ್ಲಿ ಧಾರವಾಡದಲ್ಲಿ ಕರ್ನಾಟಕದ ಮೊದಲ ರಾಜಕೀಯ ಸಮಾವೇಶ ವಿ.ಪಿ.ಮಾಧವರಾವ್ ಅಧ್ಯಕ್ಷತೆಯಲ್ಲಿ ನಡೆಯಿತು. 8. ಕರ್ನಾಟಕ ಏಕೀಕರಣದ ಪ್ರಥಮ ಸಮ್ಮೇಳನ ಬೆಳಗಾವಿಯಲ್ಲಿ ಸಿದ್ದಪ್ಪ ಕಂಬಳಿಯ ಅಧ್ಯಕ್ಷತೆಯಲ್ಲಿ 1924 ರಲ್ಲಿ ನಡೆಯಿತು. 9. 1946 ರಲ್ಲಿ ಕರ್ನಾಟಕ ಏಕೀಕರಣ ಸಮ್ಮೇಳನ ಬಾಂಬೆಯಲ್ಲಿ ಖೇರ್ ಅಧ್ಯಕ್ಷತೆಯಲ್ಲಿ ನಡೆಯಿತು. 10. ಎಸ್.ನಿಜಲಿಂಗಪ್ಪ ಕರ್ನಾಟಕ ಏಕೀಕರಣ ಮಹಾಸಮಿತಿಯ ಅಧ್ಯಕ್ಷರಾಗಿದ್ದರು,ಅಂದಾನಪ್ಪ ದೊಡ್ಡಮೇಟಿ ಕಾರ್ಯದರ್ಶಿಗಳಾಗಿದ್ದರು. 11. 1947ರ ಕರ್ನಾಟಕ ಏಕೀಕರಣ ಸಮ್ಮೇಳನವು ಕಾಸರಗೋಡಿನಲ್ಲಿ ಆರ್.ಆರ್.ದಿವಾಕರ್ ಅಧ್ಯಕ್ಷತೆಯಲ್ಲಿ ನಡೆಯಿತು. 12. ಜೆ.ವಿ.ಪಿ.ಕಮಿಟಿ.1948 ಆಂಧ್ರ ಪ್ರದೇಶ ...