Sunday 7 January 2018

ಕನ್ನಡ ಸುಭಾಷಿತಗಳು ಕನ್ನಡ ನುಡಿಮುತ್ತು ಗಳು kannada subhashitagalu Kannada nudi muttugalu






1. ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು.---- ಡಾ.ಬಿ.ಆರ್.ಅಂಬೇಡ್ಕರ್.
2. ಪರರನ್ನು ಗೌರವಿಸುವುದನ್ನು ಕಲಿಯದಿದ್ದರೆ ನಾವೆಂದೂ ದೊಡ್ಡವರಾಗುವುದಿಲ್ಲ.----ವಲ್ಲಭ ಭಾಯಿ ಪಟೇಲ್.
3. ಜಗತ್ತಿನಲ್ಲಿ ಅತ್ಯಂತ ಬಲಯುತ ಶಕ್ತಿ ಎಂದರೆ ಪ್ರೀತಿ. ಪ್ರೀತಿ ಇಲ್ಲದ ಜೀವನ ಸಾವಿಗೆ ಸಮ.---ಮಹಾತ್ಮಾ ಗಾಂಧಿ.
4. ಬೇಟೆಯ ನಂತರ,ಯುದ್ಧದ ವೇಳೆ ಮತ್ತು ಚುನಾವಣೆಗೆ ಮುನ್ನ ಹೇಳುವಷ್ಟು ಸುಳ್ಳುಗಳನ್ನು ಜನ ಇನ್ಯಾವ ಹೊತ್ತಲ್ಲೂ ಹೇಳುವುದಿಲ್ಲ. ----ಬಿಸ್ಮಾರ್ಕ್.
5. ಸತ್ಯಕ್ಕೆ ಒಂದು ಬಣ್ಣ. ಸುಳ್ಳಿಗೆ ನಾನಾ ಬಣ್ಣ. ----ಲ್ಯಾಟಿನ್ ಗಾದೆ.
6. ಶಕ್ತಿ ದೈಹಿಕ ಬಲದಿಂದ ಬರುವುದಿಲ್ಲ. ಅದು ಬರುವುದು ಅದಮ್ಯವಾದ ಇಚ್ಛಾಶಕ್ತಿಯಿಂದ.----ಮಹಾತ್ಮಾ ಗಾಂಧಿ.
7. ಶ್ರದ್ಧೆ ಇಲ್ಲದೆ ಮಾಡುವ ಯಾವ ಕೆಲಸವೂ ಮಹಾನ್ ಆಗುವುದಿಲ್ಲ. ----ಎಮರ್ಸನ್.
8. ಜೀವನದಲ್ಲಿ ಪ್ರಾಮಾಣಿಕತೆಗಿಂತ ಐಶ್ವರ್ಯ ದೊಡ್ಡದಲ್ಲ.----ಜಾನ್ ರಸ್ಕಿನ್.
9. ಅರ್ಹರ ಮುಂದೆ ಕೊಂಕಿಲ್ಲದ ತಪ್ಪೊಪ್ಪಿಗೆ , ಮತ್ತೆ ಮಾಡೆನೆಂಬ ಭರವಸೆ ಇವೇ ಪರಿಶುದ್ಧವಾದ ಪಶ್ಚಾತ್ತಾಪ. ----ಮಹಾತ್ಮಾ ಗಾಂಧಿ.
10. ಸೌಂದರ್ಯವೇ ಸತ್ಯ. ಸತ್ಯವೇ ಸೌಂದರ್ಯ. ಬದುಕಿಗೆ ಬೇಕಾಗಿರುವುದು ಇದೇ.---- ಜಾನ್ ಕೀಟ್ಸ್.
11. ತಾಳ್ಮೆ ಕಹಿಯಾದರೂ ಅದರ ಫವ ಸಿಹಿ. ---- ರೂಸೊ.
12. ತೆಗೆದುಕೊಳ್ಳುವುದಕ್ಕಿಂತ ಮೊದಲು ಕೊಡು.ಅದರಿಂದ ನಿನಗೆ ಅತ್ಯಂತ ಒಳ್ಳೆಯದೇ ಸಿಕ್ಕೀತು.----ಸ್ವಾಮಿ ರಂಗನಾಥಾನಂದ.
13. ದುಃಖಿಸಬೇಡಿ.ನೀವು ಕಳೆದುಕೊಂಡದ್ದು ಇನ್ನೊಂದು ರೂಪದಲ್ಲಿ ನಿಮ್ಮೆದುರು ಬಂದೇ ಬರುತ್ತದೆ. ---- ಜಲಾಲುದ್ದೀನ್ ರೂಮಿ.
14. ಅನುಭವವೆಂದರೆ ತಪ್ಪುಗಳನ್ನು ಮಾಡುವುದು ಮತ್ತು ಅದರಿಂದ ಕಲಿಯುವುದು.---- ಬಿಲ್ ಆಕ್ಮನ್.
15. ದಾರಿ ಗೊತ್ತಿರುವವನು , ದಾರಿಯಲ್ಲಿ ನಡೆಯುವವನು ಮತ್ತು ದಾರಿ ತೋರಿಸುವವನೇ ನಿಜವಾದ ನಾಯಕ. ---- ಜಾನ್ ಮ್ಯಾಕ್ಸ್ ವೆಲ್.
16. ಆಡಳಿತ ಕೆಲಸವನ್ನು ಸರಿ ಮಾಡಿಸುತ್ತದೆ.ನಾಯಕತ್ವ ಸರಿಯಾದ ಕೆಲಸವನ್ನು ಮಾಡಿಸುತ್ತದೆ.-----ಪೀಟರ್ ಡ್ರೆಕರ್.
17. ತಪ್ಪುಗಳನ್ನು ಹುಡುಕಬೇಡಿ; ಪರಿಹಾರಗಳನ್ನು ಹುಡುಕಿ. ----ಹೆನ್ರಿ ಫೋರ್ಡ್.
18. ಹುಟ್ಟು ಹಾಕದೆ ಕುಳಿತವನಿಗೆ ಮಾತ್ರ ದೋಣಿಯಲ್ಲಿ ತೂತು ಕೊರೆಯಲು ಸಮಯವಿರುತ್ತದೆ.---- ಜೀನ್ ಪಾಲ್ ಸಾರ್ತ್ರೆ.
19. ನೀವು ಚಟುವಟಿಕೆಯಿಂದ ಇದ್ದಾಗ ಎಲ್ಲ ಕೆಲಸಗಳೂ ಸುಲಭ.ನೀವು ಸೋಮಾರಿಯಾಗಿದ್ದಾಗ ಎಲ್ಲಾ ಕೆಲಸವೂ ಕಷ್ಟ. ----ಸ್ವಾಮಿ ವಿವೇಕಾನಂದ.
20. ನಿಮ್ಮ ಜೀವನದಲ್ಲಿ ಕೆಲವರು ಆಶೀರ್ವಾದದಂತೆ ಬರುತ್ತಾರೆ; ಇನ್ನು ಕೆಲವರು ಪಾಠದಂತೆ ಬರುತ್ತಾರೆ ----ಮದರ್ ತೆರೆಸಾ.
21. ಕಣ್ಣಿದ್ದು ದೂರದೃಷ್ಟಿ ಇಲ್ಲದಿರುವುದು ,ಕುರುಡರಾಗಿರುವುದಕ್ಕಿಂತ ಕೆಟ್ಟದ್ದು.----- ಹೆಲನ್ ಕೆಲ್ಲರ್.
22. ಸುಖದ ದಾಹ ಮನೆಯೊಳಗೆ ಅತಿಥಿಯಂತೆ ಬರುತ್ತದೆ, ಬಳಿಕ ಅತಿಥೇಯನಾಗುತ್ತದೆ.ಕೊನೆಗೆ ಮನೆಯನ್ನೇ ಆಳುತ್ತದೆ.-----ಗಲೀಲ್ ಗಿಬ್ರಾನ್.
23. ಸಾಮಾನ್ಯವಾಗಿ ನಾಳೆ ಎನ್ನುವುದು ಇಡೀ ವಾರದಲ್ಲಿ ಪುರುಸೊತ್ತೇ ಇಲ್ಲದ ದಿನ. -----ಸ್ಪೇನ್ ಗಾದೆ.
24. ಸತ್ಯವನ್ನು ಹುಡುಕಾಡುವವನನ್ನು ನಂಬಿ; ಸತ್ಯವನ್ನು ಕಂಡುಹಿಡಿದವನನ್ನು ಸಂಶಯಿಸಿ.----ಆಂಡ್ರೆ ಗೈಡ್.
25. ಬರಿಹೊಟ್ಟೆಯಲ್ಲಿ ಇರುವವನಿಗೆ ಆಹಾರವೇ ದೇವರು.---- ಮಹಾತ್ಮಾ ಗಾಂಧಿ.

No comments:

Post a Comment

Specialty in Kannada.. firsts in Kannada

 ಕನ್ನಡದ ವಿಶಿಷ್ಟ ಹಾಗೂ ವೈವಿಧ್ಯಮಯ ಸಂಗತಿಗಳು