Skip to main content

kannada moral stories in kannada kannada neeti kathegalu nithikathegaluಕನ್ನಡ ಕನ್ನಡ ನೀತಿ ಕತೆಗಳು

ದೇವಸ್ಥಾನಕ್ಕೆ ಹೋಗಿಬಂದ ಆಕೆ ತಂದೆಗೆ ಇನ್ನುಮುಂದೆ ದೇವಸ್ಥಾನಕ್ಕೆ ಹೋಗಲ್ಲ ಎಂದಳು.. ಯಾಕೆ ಗೊತ್ತಾ..? ಬಳಿಕ ತಂದೆ ಏನೆಂದರೆಂದರೆ..?
2 ನಿಮಿಷ ಸಮಯ ಕೊಟ್ಟು ಓದಿ

ಓರ್ವ ಯುವತಿಯೊಬ್ಬಳು ದೇವಸ್ಥಾನಕ್ಕೆ ಹೋಗಿ ಬಂದಳು.. ದರ್ಶನ ಚೆನ್ನಾಗಿ ಆಯಿತಾ ಮಗಳೇ, ಎಂದು ತಂದೆ ಪ್ರಶ್ನಿಸಿದರು….
ಮಗಳು: ಇನ್ನು ಮುಂದೆ ನನ್ನನ್ನು ದೇವಸ್ಥಾನಕ್ಕೆ ಹೋಗು ಎಂದು ಹೇಳಬೇಡಿ.. ಕೋಪದಿಂದ ನುಡಿದಳು…
ತಂದೆ: ಏನು ನಡೆಯಿತು ಮಗಳೇ..
ಮಗಳು: ದೇವಸ್ಥಾನದಲ್ಲಿ ಒಬ್ಬರಿಗೂ ಭಕ್ತಿ ಇಲ್ಲ, ದೇವರ ಮೇಲೆ ಧ್ಯಾನ ಇಲ್ಲ. ಎಲ್ಲರೂ ಅವರ ಮೊಬೈಲ್ ಫೋನ್‌ಗಳಲ್ಲಿ ಮಾತನಾಡುವುದು, ಫೋಟೋಗಳನ್ನು ತೆಗೆಯುವುದು,
ಭಕ್ತಿಗೆ ಸಂಬಂಧಿಸಿದ್ದು ಅಲ್ಲವೆ ಬೇರೆ ಸಂಗತಿಗಳನ್ನು ಚರ್ಚಿಸುವುದನ್ನು ಮಾಡುತ್ತಿದ್ದಾರೆ. ಕನಿಷ್ಠ ಭಜನೆಗಳ ಬಳಿ ಸಹ ಸರಿಯಾಗಿ ನಡೆದುಕೊಳ್ಳುತ್ತಿಲ್ಲ. ಯಾರಲ್ಲೂ ನನಗೆ ಭಕ್ತಿ ಕಾಣಿಸಲಿಲ್ಲ.

ತಂದೆ: (ಸ್ವಲ್ಪ ಹೊತ್ತು ಮೌನವಾಗಿದ್ದು) ಸರಿ.. ನೀನು ಅಂತಿಮ ನಿರ್ಧಾರಕ್ಕೆ ಬರುವ ಮುನ್ನ ನನ್ನದೊಂದು ಸಣ್ಣ ಕೋರಿಕೆ… ನೆರವೇರಿಸುತ್ತೀಯಾ..?
ಮಗಳು: ಖಂಡಿತ ಅಪ್ಪಾ… ನಿಮ್ಮ ಮಾತನ್ನು ನಾನು ಯಾವಾಗಲೂ ಇಲ್ಲ ಎಂದಿಲ್ಲ. ಹೇಳಿ ಏನು ಮಾಡಬೇಕು…
ತಂದೆ: ಒಂದು ಗಾಜಿನ ಗ್ಲಾಸಿನ ತುಂಬ ನೀರು ತೆಗೆದುಕೊಂಡು ಹೋಗು ದೇವಸ್ಥಾನಕ್ಕೆ.. ಮೂರೇ ಮೂರು ಪ್ರದಕ್ಷಿಣೆ ಮಾಡಿ ಬರಬೇಕು.. ಆದರೆ ಸಣ್ಣ ಸೂಚನೆ…ನಿನ್ನ ಗ್ಲಾಸ್‌ನಿಂದ ಒಂದೇ ಒಂದು ಹನಿ ನೀರು ಚೆಲ್ಲಬಾರದು. ಈ ಕೆಲಸ ಮಾಡುತ್ತೀಯಾ…….
ಮಗಳು: ಹಾಗೆಯೇ ಆಗಲಿ. ಖಂಡಿತ ತರುತ್ತೇನೆ ನಿಮಗಾಗಿ ಎಂದು.. ಒಂದು ಗ್ಲಾಸ್ ತುಂಬ ನೀರು ತೆಗೆದುಕೊಂಡು ಹೊರಟಳು.. ಮೂರು ಗಂಟೆಗಳ ಬಳಿಕ ಮನೆಗೆ ಗ್ಲಾಸ್ ನೀರಿನಿಂದ ಹಿಂತಿರುಗಿದಳು..
ಮಗಳು: ತಗೋ ಅಪ್ಪಾ…ನಾನು ದೇವಸ್ಥಾನಕ್ಕೆ ಈ ಗ್ಲಾಸ್ ನೀರಿನಿಂದ ಹೋಗಿ ನೀವು ಹೇಳಿದ ರೀತಿ ಮೂರು ಪ್ರದಕ್ಷಿಣೆ ಪೂರ್ಣಗೊಳಿಸಿ ಬಂದೆ. ಒಂದೇ ಒಂದು ಹನಿ ನೀರು ಸಹ ಚೆಲ್ಲಲಿಲ್ಲ…

ತಂದೆ ಮೂರು ಪ್ರಶ್ನೆಗಳನ್ನು ಕೇಳಿದರು.
1. ನೀನು ಪ್ರದಕ್ಷಿಣೆ ಮಾಡುತ್ತಿದ್ದಾಗ ಎಷ್ಟು ಮಂದಿ ತಮ್ಮ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದರು.?
2. ಎಷ್ಟು ಮಂದಿ ಅನಗತ್ಯ ವಿಚಾರಗಳನ್ನು ದೇವಸ್ಥಾನದಲ್ಲಿ ಚರ್ಚಿಸುತ್ತಿದ್ದರು?
3. ಎಷ್ಟು ಮಂದಿ ಸ್ವಲ್ಪವೂ ಭಕ್ತಿ ಇಲ್ಲದೆ ನಡೆದುಕೊಂಡರು?
ಮಗಳು: ನಾನೇಗೆ ಹೇಳಲು ಸಾಧ್ಯ ಅಪ್ಪಾ.. ನನ್ನ ದೃಷ್ಟಿಯೆಲ್ಲಾ ಗ್ಲಾಸ್‌ನಿಂದ ಒಂದೇ ಒಂದು ಹನಿ ನೀರು ಚೆಲ್ಲದಂತೆ ಎಚ್ಚರ ವಹಿಸಿದ್ದೆ, ನನ್ನ ದೃಷ್ಟಿಯೆಲ್ಲಾ ಅದರ ಮೇಲೇ ಇತ್ತು…
ತಂದೆ: ಇದೇನಮ್ಮಾ ನಾನು ಹೇಳಬೇಕೆಂದುಕೊಂಡಿದ್ದು. ನೀನು ದೇವಸ್ಥಾನಕ್ಕೆ ಹೋದಾಗ ನಿನ್ನ ದೃಷ್ಟಿ ಭಗವಂತನ ವಿಗ್ರಹದ ಮೇಲೆ, ನಿನ್ನ ಧ್ಯಾನ ಅವರ ಮೇಲೆ ಇರಬೇಕು. ಆಗ ನೀನು ಅಂತಃ ಮುಖಿಯಾಗಿ ಭಗವಂತನ ಪಡೆಯುತ್ತೀಯ. ಜೀವನ ವೃದ್ಧಿಗೊಳ್ಳಲು ಈ ವಿಧವಾದ ಏಕಾಗ್ರತೆ ಸಾಧಿಸಬೇಕು.

ಮಗಳು: ತುಂಬಾ ಥ್ಯಾಂಕ್ಸ್ ಅಪ್ಪಾ… ಈ ದಿನ ನನಗೆ ಭಗವಂತನ ದೇವಾಲಯ ಯಾಕೆ ಕಟ್ಟಿದ್ದಾರೆ, ಅಂತಃರ್ಮುಖಿ ಆಗುವುದು ಎಂದರೆ ಏನು ಎಂಬ ವಿಷಯಗಳ ಬಗ್ಗೆ ಅರಿವು ಮೂಡಿಸಿದಿರಿ..

ನಿಮ್ ಮಕ್ಕಳಲ್ಲಿ ಧರ್ಮ ಪ್ರಜ್ಞೆ ಜಾಗೃತಗೊಳಿಸಿ.

Comments

  1. For kannada comics magazine like indrajaal amar chitra katha or any comics magazine like chandamama tinkle tintin once contact me Whatspp 7870475981

    ReplyDelete

Post a Comment

Popular posts from this blog

ಸವರ್ಣ ದೀರ್ಘ ಸಂಧಿ. ಸವರ್ಣ ದೀರ್ಘ ಸಂಧಿ ಉದಾಹರಣೆಗಳು savarna dhirgha sandhi. Savarna dhirgha sandhi examples

ಸವರ್ಣ ದೀರ್ಘ ಸಂಧಿ. [ ] ಪೂರ್ವ ಪದದ ಅಂತ್ಯ ಸ್ವರ ಮತ್ತು ಉತ್ತರ ಪದದ ಆರಂಭದ ಸ್ವರ ಒಂದೇ ರೀತಿಯ ವರ್ಣವಾಗಿದ್ದರೆ , ಸಂಧಿಕಾರ್ಯ ನಡೆಯುವಾಗ ಅದೇ ಸ್ವರದ ದೀರ್ಘ ಸ್ವರವು ಆದೇಶವಾಗಿರುವುದು ಕಂಡು ಬರುತ್ತದೆ. [ ] ಸಂಧಿಕಾರ್ಯ ನಡೆಯುವಾಗ ಒಂದೇ ರೀತಿಯ ಸ್ವರಾಕ್ಷರಗಳು ಪರಸ್ಪರ ಸೇರಿ ದೀರ್ಘ ಸ್ವರ ಆದೇಶವಾದರೆ ಅಂತಹ ಸಂಧಿಯನ್ನು "ಸವರ್ಣ ದೀರ್ಘ ಸಂಧಿ "ಎಂದು ಕರೆಯುತ್ತಾರೆ. [ ] ಸವರ್ಣಾಕ್ಷರಗಳಿಗೆ ಸವರ್ಣಾಕ್ಷರಗಳ ಪರವಾಗಿ ಸವರ್ಣ ದೀರ್ಘಾಕ್ಷರಗಳು ಬಂದರೆ ಸವರ್ಣ ದೀರ್ಘ ಸಂಧಿ. [ ] ಉದಾಹರಣೆಗೆ ಪೂರ್ವ ಪದ + ಉತ್ತರ ಪದ = ಸಂಧಿಪದ 1. ರವಿ + ಇಂದ್ರ = ರವೀಂದ್ರ ( ಇ+ಇ= ಈ) 2. ದೇವ+ ಆಲಯ= ದೇವಾಲಯ. (ಅ+ಆ=ಆ) 3. ಗುರು+ ಉಪದೇಶ =ಗುರೂಪದೇಶ (ಉ+ಉ=ಊ) 4. ಮಹಾ+ ಆತ್ಮ = ಮಹಾತ್ಮ (ಆ+ಆ=ಆ) 5. ಗಿರಿ+ ಇಂದ್ರ = ಗಿರೀಂದ್ರ 6. ಮುನಿ+ ಇಂದ್ರ =ಮುನೀಂದ್ರ. 7. ಅಲ್ಪ + ಅಕ್ಷರ =ಅಲ್ಪಾಕ್ಷರ. 8. ವಿದ್ಯ+ ಅರ್ಜನೆ=ವಿದ್ಯಾರ್ಜನೆ. 9. ರಾಕ್ಷಸ + ಅಧಿಪತಿ= ರಾಕ್ಷಸಾಧಿಪತಿ. 10. ಸೀತ+ಅನ್ವೇಷಣೆ= ಸೀತಾನ್ವೇಷಣೆ. 11. ಪಂಚ+ಆಸ್ಯ=ಪಂಚಾಸ್ಯ. 12. ಶಾಸಕ+ಅಂಗ=ಶಾಸಕಾಂಗ. 13. ಅಭಯ+ಅರಣ್ಯ =ಅಭಯಾರಣ್ಯ. 14. ಉಭಯ+ಅರಣ್ಯ =ಉಭಯಾರಣ್ಯ 15. ವಸ್ರ್ತ + ಆಭರಣ= ವಸ್ತ್ರಾಭರಣ. 16. ಗೌರಿ+ಈಶ =ಗೌರೀಶ. 17. ಕಟು+ಉಕ್ತಿ=ಕಟೂಕ್ತಿ. 18. ಕೃಷ್ಣ +ಅಜಿನ=ಕೃಷ್ಣಾಜಿನ. 19. ಪೀತ+ಅಂಬರ=ಪೀತಾಂಬರ. 20. ಏಕ+ಆಸ...

ಡಾ.ಸತ್ಯಾನಂದ ಪಾತ್ರೋಟ Dr.satyananda patrota

• ಡಾ.ಸತ್ಯಾನಂದ ಪಾತ್ರೋಟ • ಜನನ- ಬಾಗಲಕೋಟೆ • ವಿದ್ಯಾಭ್ಯಾಸ ~ಎಂ.ಎ., ಪಿ.ಎಚ್.ಡಿ. • ಉದ್ಯೋಗ ~ ಬಾಗಲಕೋಟೆಯ ಎಸ್.ಬಿ.ಪಾಟೀಲ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಅಧ್ಯಾಪಕರು. • ಕವನ ಸಂಕಲನಗಳು 1. ಕರಿನೆಲದ ಕಲೆಗಳು 2. ಜಾಜಿ ಮಲ್ಲಿಗೆ 3. ಕಲ್ಲಿಗೂ ಗೊತ್ತಿರುವ ಕಥೆ. 4. ಕರಿಯ ಕಟ್ಟಿದ ಕವನ 5. ನನ್ನ ಕನಸಿನ ಹುಡುಗಿ 6. ನದಿಗೊಂದು ಕನಸು ಮತ್ತು ಅವಳು ನಾಟಕಗಳು 1. ನಮಗ ಯಾರು ಇಲ್ಲೋ ಎಪ್ಪಾ ಸಾಕ್ಷಿ 2. ಮತ್ತೊಬ್ಬ ಏಕಲವ್ಯ ಪ್ರಬಂಧ ಸಂಕಲನ 1. ಒಂದಿಷ್ಟು ಕ್ಷಣಗಳು ಕಾವ್ಯದ ಧ್ವನಿಸುರುಳಿ 1. ಎದೆಯ ಮಾತು ಪ್ರಶಸ್ತಿ- ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Kannada grammar for kpsc exams ಕೆ.ಪಿ.ಎಸ್. ಸಿ.ಪರೀಕ್ಷೆಗಳಿಗೆ ಕನ್ನಡ ವ್ಯಾಕರಣ

 ಕೆ.ಪಿ.ಎಸ್. ಸಿ ನಡೆಸುವ ಪ್ರತಿಯೊಂದು ಪರೀಕ್ಷೆಗಳಲ್ಲಿ ಕನ್ನಡಕ್ಕೆ ಸಂಬಂಧಪಟ್ಟಂತೆ 35 ಅಂಕಗಳನ್ನು ನಿಗದಿಪಡಿಸಲಾಗಿದೆ. ಪರೀಕ್ಷೆಗೆ ಅನಕೂಲವಾಗಲೆಂದು  ಕನ್ನಡ ವ್ಯಾಕರಣಕ್ಕೆ ಸಂಬಂಧಪಟ್ಟ ಕೆಲವು ಮಾಹಿತಿ ಸಂಗ್ರಹಿಸಿ ಸ್ಪರ್ಧಾರ್ಥಿಗಳ ಅನುಕೂಲಕ್ಕಾಗಿ ನೀಡಲಾಗಿದೆ.ಆಸಕ್ತರು ಇದರ ಸದುಪಯೋಗ ಪಡೆಯಬಹುದು. □  □ □ □ □ □ □ □ □ □ □ □ □ □ □     ತತ್ಸಮ - - - -  - - - - - - - - - ತದ್ಭವ (ಸಂಸ್ಕೃತ )                    (ಕನ್ನಡ ) ■ ನರ್ತಕಿ - ನಚ್ಚಣಿ ■ ಲಕ್ಷ್ಮಿ - ಲಕ್ಕಿ ,ಲಕುಮಿ ■ವೇಷ - ವೇಸ ■ಲೇಪ - ಲಪ್ಪ ■ವರ್ಧಮಾನ - ಬದ್ದವಣ ■ವಜ್ರ - ಬಜ್ಜರ ■ವತ್ಸಲಾ - ಬಚ್ಚಳೆ ■ವಿಸ್ತಾರ - ಬಿತ್ತರ ■ವೃದ್ಧ - ವಡ್ಡ ■ವೃದ್ಧಿ - ಬಡ್ಡಿ ■ವ್ಯಾಖ್ಯಾನ - ವಕ್ಕಣೆ ■ವ್ಯಾಘ್ರ - ಬಗ್ಗ ■ವರ್ಧಕಿ - ಬಡಗಿ ■ವಿದ್ಯೆ - ಬಿಜ್ಜೆ ■ವೈದ್ಯ - ಬೆಜ್ಜ ■ವಿಜ್ಞಾನ - ಬಿನ್ನಣ ■ಶಿಲ್ಪಕ,ಶಿಲ್ಪಿ - ಸಿಂಪಿಗ ,ಚಿಪ್ಪಿಗ ■ಶೂನ್ಯ - ಸೊನ್ನೆ ■ಅವಸ್ಥೆ - ಅವತೆ ■ಅರ್ಹ - ಅರುಹ ■ಅರ್ಗಲ,ಅರ್ಗಲೆ - ಅಗಳಿ,ಅಗುಳಿ (ಚಿಲಕ) ■ಅಂಗುಷ್ಠ - ಅಂಗುಟ ,ಉಂಗುಟ. ■ಆಲಸ್ಯ - ಆಲಸ ■ಆಜ್ಞಾ, ಆಜ್ಞೆ - ಆಣೆ ■ಕ್ರಕಚ - ಗರಗಸ ■ಕ್ಷಣ - ಚಣ ■ಗ್ರಹ - ಗರ ■ಗ್ರಹಣ - ಗರಣ ■ಗ್ರಾಮೀಣ - ಗಾವಿಲ ■ಲಕ್ಷ - ಲಕ್ಕ ■ ಶ್ರೇಷ್ಠಿ -...