Skip to main content

ನೀತಿ ಕತೆಗಳು ಕನ್ನಡ ನೀತಿ ಕತೆಗಳು ಕನ್ನಡ ಸಣ್ಣ ಕತೆಗಳು ನೀತಿ ಕತೆಗಳು kannada neethi kathegalu Kannada nithi kathegalu

*ಸ್ವಾರಸ್ಯವಾದ ಕಥೆ*                               



*ತೋಟದ ದಂಡೆಗುಂಟ ಹಚ್ಚಿದ ಮಾವಿನ ಮರಗಳಲ್ಲಿ ಆ ವರ್ಷ ಸಾಕಷ್ಟು ಕಾಯಿಗಳಾಗಿದ್ದವು. ಮಾಲಿಕನು ಅವುಗಳನ್ನೆಲ್ಲ ಕೋಣೆಯ ಒಣಹುಲ್ಲು ಹಾಸಿನ ಮೇಲೆ ಹರವಿ ಮೇಲೆ ಒಂದಿಷ್ಟು ಹುಲ್ಲು ಹಾಕಿ ಕಂಬಳಿ, ಗೋಣಿಚೀಲ ಹೊದಿಸಿ ಹಣ್ಣು ಮಾಡಲೆಂದು ಇಟ್ಟನು. ವಾರದ ನಂತರ ಕೋಣೆಯೊಳಗಿಂದ ಮಾವಿನ ಹಣ್ಣಿನ ಪರಿಮಳ ಬರಲಾರಂಭಿಸಿತು. ಅವುಗಳಲ್ಲಿ ಎಂಟ್ಹತ್ತು ಕಾಯಿಗಳು ಒಳ್ಳೆ ಹಣ್ಣುಗಳಾಗಿ ತಿನ್ನಲಿಕ್ಕೆ ತಯಾರಾಗಿದ್ದವು. ಉಳಿದವು ಸ್ವಲ್ಪ ಸ್ವಲ್ಪ ಹಣ್ಣುಗಳಾಗಿ ಕೆಲ ದಿನಗಳಲ್ಲಿ ಮಾಗಲಿದ್ದವು. ಅಷ್ಟರಲ್ಲಿ ಮಾಲಿಕನ ದೃಷ್ಟಿ ಒಂದು ಮೂಲೆಯ ಕಡೆಗೆ ಹೊರಳಿತು. ಅಲ್ಲಿ ನಾಲ್ಕೈದು ಕಾಯಿಗಳು ಸಂಪೂರ್ಣ ಹಣ್ಣುಗಳಾಗಿ ಮೇಲ್ಭಾಗದಲ್ಲಿ ಕೊಳೆಯಲಾರಂಭಿಸಿದ್ದವು.* ಅವನು ಆ ಹಣ್ಣುಗಳನ್ನು ಮಾತ್ರ ಅಲ್ಲಿಂದ ಹೊರತೆಗೆದು-
*‘ಇವಷ್ಟನ್ನು ಇಂದು ತಿಂದರಾಯಿತು. ಹೇಗೂ ನಾಳೆಯಿಂದ ಒಳ್ಳೆಯ ಹಣ್ಣುಗಳು ಸಿಗುತ್ತವೆ’ ಎಂದೆಣಿಸಿ ಮೇಲಿನ ಕೊಳೆತ ಭಾಗವನ್ನು ಚಾಕುವಿನಿಂದ ತೆಗೆದು ಅರ್ಧರ್ಧ ಭಾಗವನ್ನು ತಿಂದನು*.
ಮರುದಿನ ಮತ್ತೆ ಐದಾರು ಹಣ್ಣುಗಳು ತಯಾರಾಗಿದ್ದವು. *ಆದರೆ ನಿನ್ನೆ ತಿನ್ನಲು ತಯಾರಾಗಿದ್ದ ಆ ಎಂಟ್ಹತ್ತು ಹಣ್ಣುಗಳು ಇಂದು ಅರ್ಧ ಕೊಳೆತಿದ್ದವು. ಆಗ ಅವುಗಳನ್ನು ಬಿಸಾಡಲು ಮನಸ್ಸಾಗದೆ ಮತ್ತೆ ಅವುಗಳನ್ನಷ್ಟೇ ಹೊರಗೆ ತೆಗೆದು ಅರ್ಧಭಾಗವನ್ನು ತಿಂದ.*
*ಮೂರನೇ ದಿನವೂ ಇದೇ ಪರಿಯಾಯಿತು. ಅಂತೂ ಅವನು ಆ ಎಲ್ಲ ಹಣ್ಣುಗಳನ್ನು ಅರ್ಧಕೊಳೆತ ಸ್ಥಿತಿಯಲ್ಲೇ ತಿಂದ*.
*ನಿಜ ಹೇಳಬೇಕೆಂದರೆ ಅವುಗಳನ್ನು ಕೊಳೆಯಿಸಿಯೇ ತಿಂದ*. ಒಂದು ವೇಳೆ ಮೊದಲನೇ ದಿನವೇ ಧೈರ್ಯಮಾಡಿ, ಯೋಚಿಸಿ ಕೊಳೆತ ಹಣ್ಣುಗಳನ್ನು ಬಿಸಾಡಿ ಒಳ್ಳೆಯ ಹಣ್ಣುಗಳನ್ನು ತಿನ್ನಲಾರಂಭಿಸಿದ್ದರೆ *ಪ್ರತಿದಿನವೂ ಒಳ್ಳೆಯ ಹಣ್ಣುಗಳನ್ನೇ ಅವನು ತಿನ್ನಬಹುದಾಗಿತ್ತಲ್ಲವೇ?*

ನಮ್ಮಲ್ಲಿಯೂ ಬಹುತೇಕರು ಇದೇ ರೀತಿ ಜೀವನ ವ್ಯಯಿಸುತ್ತೇವೆ.
*ನಾಳೆಗೆ ಬೇಕೆಂಬ ದುರಾಶೆಗೆ ಬಲಿಯಾಗಿ ಇಂದಿನ ಸುಖ ಕಳೆದುಕೊಳ್ಳುತ್ತೇವೆ.* ಸುಖವೆನ್ನುವುದು ಬರೀ ಮರೀಚಿಕೆಯಾಗುತ್ತದೆ.
*ಊಟ ಆರಂಭಿಸಿದ ತಕ್ಷಣ ತಂಗುಳ ಏನಾದರೂ ಉಳಿದಿದ್ದರೆ ತೀರಿಸಿ ಆ ಮೇಲೆ ಹಸಿವೆಯುಳಿದಿದ್ದರೆ ಬಿಸಿ ಅನ್ನ ಉಣ್ಣುತ್ತೇವೆ*.
 *ಆ ಉಳಿದ ಬಿಸಿ ಅನ್ನವನ್ನು ಮತ್ತೆ ಮರುದಿನ ತಿನ್ನುತ್ತೇವೆ* ಯಾರಾದರೂ ಉಡುಗೊರೆಯಾಗಿ ಕೊಟ್ಟ *ಒಳ್ಳೆಯ ಪೆನ್ನುಗಳನ್ನು ಬೀರುವಿನಲ್ಲಿಟ್ಟು ಪ್ಲಾಸ್ಟಿಕ್ ಪೆನ್ನಲ್ಲಿ ಬರೆಯುತ್ತೇವೆ*. ಸ್ವಲ್ಪದಿನಗಳ ಬಳಿಕ ನೋಡಿದಾಗ
*ಆ ಒಳ್ಳೆಯ ಪೆನ್ನುಗಳೂ ಬರೆಯಲಾರದ ಸ್ಥಿತಿಗೆ ಬಂದಿರುತ್ತವೆ.*
*ಹೊಸ ಮನೆ ಕಟ್ಟಿಸಿ ಬಾಡಿಗೆಗೆ ಕೊಟ್ಟು ಹಳೆಯ ಚಿಕ್ಕದಾದ ಮನೆಯಲ್ಲಿ ಇರುತ್ತೇವೆ.*
*ಸಮಯವನ್ನೂ ಹೀಗೆ ಕಳೆದು ಸೃಜನಾತ್ಮಕ, ಸಮಾಜಮುಖಿ ಅಥವಾ ಆಧ್ಯಾತ್ಮಿಕ ಕಾರ್ಯದ ಅವಕಾಶ ಬಂದಾಗ ಈಗ ಸಮಯವಿಲ್ಲವೆಂದು ಬಿಡುತ್ತೇವೆ. ಹಾಗಾದರೆ ಜೀವನವನ್ನು ಆನಂದಿಸುವುದು ಯಾವಾಗ?*

ಭಗವದ್ಗೀತೆಯ ಕರ್ಮಯೋಗವು ಜೀವನವನ್ನು ಹೇಗೆ ಜೀವಿಸಬೇಕೆಂದು ಸುಂದರವಾಗಿ ಹೇಳಿದೆ. *ನಾವೆಲ್ಲರೂ ಕರ್ಮ ಮಾಡುತ್ತೇವೆ ಆದರೆ ಅದು ಲೋಭಮಯವಾಗಿರುವ ತಪ್ಪು ನಿರ್ಧಾರಗಳಿಂದಾಗಿ ‘ದೈವ ಕೊಟ್ಟರೂ ದರಿದ್ರತನ ತಪ್ಪಲಿಲ್ಲ’ ಎಂಬಂತೆ ಆಗಿ ಬಿಡುತ್ತದೆ*.
*ಹಾಗಾಗದಂತೆ ಪ್ರಸನ್ನತೆಯಿಂದ ಜೀವಿಸೋಣ*

Comments

Popular posts from this blog

ಸವರ್ಣ ದೀರ್ಘ ಸಂಧಿ. ಸವರ್ಣ ದೀರ್ಘ ಸಂಧಿ ಉದಾಹರಣೆಗಳು savarna dhirgha sandhi. Savarna dhirgha sandhi examples

ಸವರ್ಣ ದೀರ್ಘ ಸಂಧಿ. [ ] ಪೂರ್ವ ಪದದ ಅಂತ್ಯ ಸ್ವರ ಮತ್ತು ಉತ್ತರ ಪದದ ಆರಂಭದ ಸ್ವರ ಒಂದೇ ರೀತಿಯ ವರ್ಣವಾಗಿದ್ದರೆ , ಸಂಧಿಕಾರ್ಯ ನಡೆಯುವಾಗ ಅದೇ ಸ್ವರದ ದೀರ್ಘ ಸ್ವರವು ಆದೇಶವಾಗಿರುವುದು ಕಂಡು ಬರುತ್ತದೆ. [ ] ಸಂಧಿಕಾರ್ಯ ನಡೆಯುವಾಗ ಒಂದೇ ರೀತಿಯ ಸ್ವರಾಕ್ಷರಗಳು ಪರಸ್ಪರ ಸೇರಿ ದೀರ್ಘ ಸ್ವರ ಆದೇಶವಾದರೆ ಅಂತಹ ಸಂಧಿಯನ್ನು "ಸವರ್ಣ ದೀರ್ಘ ಸಂಧಿ "ಎಂದು ಕರೆಯುತ್ತಾರೆ. [ ] ಸವರ್ಣಾಕ್ಷರಗಳಿಗೆ ಸವರ್ಣಾಕ್ಷರಗಳ ಪರವಾಗಿ ಸವರ್ಣ ದೀರ್ಘಾಕ್ಷರಗಳು ಬಂದರೆ ಸವರ್ಣ ದೀರ್ಘ ಸಂಧಿ. [ ] ಉದಾಹರಣೆಗೆ ಪೂರ್ವ ಪದ + ಉತ್ತರ ಪದ = ಸಂಧಿಪದ 1. ರವಿ + ಇಂದ್ರ = ರವೀಂದ್ರ ( ಇ+ಇ= ಈ) 2. ದೇವ+ ಆಲಯ= ದೇವಾಲಯ. (ಅ+ಆ=ಆ) 3. ಗುರು+ ಉಪದೇಶ =ಗುರೂಪದೇಶ (ಉ+ಉ=ಊ) 4. ಮಹಾ+ ಆತ್ಮ = ಮಹಾತ್ಮ (ಆ+ಆ=ಆ) 5. ಗಿರಿ+ ಇಂದ್ರ = ಗಿರೀಂದ್ರ 6. ಮುನಿ+ ಇಂದ್ರ =ಮುನೀಂದ್ರ. 7. ಅಲ್ಪ + ಅಕ್ಷರ =ಅಲ್ಪಾಕ್ಷರ. 8. ವಿದ್ಯ+ ಅರ್ಜನೆ=ವಿದ್ಯಾರ್ಜನೆ. 9. ರಾಕ್ಷಸ + ಅಧಿಪತಿ= ರಾಕ್ಷಸಾಧಿಪತಿ. 10. ಸೀತ+ಅನ್ವೇಷಣೆ= ಸೀತಾನ್ವೇಷಣೆ. 11. ಪಂಚ+ಆಸ್ಯ=ಪಂಚಾಸ್ಯ. 12. ಶಾಸಕ+ಅಂಗ=ಶಾಸಕಾಂಗ. 13. ಅಭಯ+ಅರಣ್ಯ =ಅಭಯಾರಣ್ಯ. 14. ಉಭಯ+ಅರಣ್ಯ =ಉಭಯಾರಣ್ಯ 15. ವಸ್ರ್ತ + ಆಭರಣ= ವಸ್ತ್ರಾಭರಣ. 16. ಗೌರಿ+ಈಶ =ಗೌರೀಶ. 17. ಕಟು+ಉಕ್ತಿ=ಕಟೂಕ್ತಿ. 18. ಕೃಷ್ಣ +ಅಜಿನ=ಕೃಷ್ಣಾಜಿನ. 19. ಪೀತ+ಅಂಬರ=ಪೀತಾಂಬರ. 20. ಏಕ+ಆಸ...

ಡಾ.ಸತ್ಯಾನಂದ ಪಾತ್ರೋಟ Dr.satyananda patrota

• ಡಾ.ಸತ್ಯಾನಂದ ಪಾತ್ರೋಟ • ಜನನ- ಬಾಗಲಕೋಟೆ • ವಿದ್ಯಾಭ್ಯಾಸ ~ಎಂ.ಎ., ಪಿ.ಎಚ್.ಡಿ. • ಉದ್ಯೋಗ ~ ಬಾಗಲಕೋಟೆಯ ಎಸ್.ಬಿ.ಪಾಟೀಲ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಅಧ್ಯಾಪಕರು. • ಕವನ ಸಂಕಲನಗಳು 1. ಕರಿನೆಲದ ಕಲೆಗಳು 2. ಜಾಜಿ ಮಲ್ಲಿಗೆ 3. ಕಲ್ಲಿಗೂ ಗೊತ್ತಿರುವ ಕಥೆ. 4. ಕರಿಯ ಕಟ್ಟಿದ ಕವನ 5. ನನ್ನ ಕನಸಿನ ಹುಡುಗಿ 6. ನದಿಗೊಂದು ಕನಸು ಮತ್ತು ಅವಳು ನಾಟಕಗಳು 1. ನಮಗ ಯಾರು ಇಲ್ಲೋ ಎಪ್ಪಾ ಸಾಕ್ಷಿ 2. ಮತ್ತೊಬ್ಬ ಏಕಲವ್ಯ ಪ್ರಬಂಧ ಸಂಕಲನ 1. ಒಂದಿಷ್ಟು ಕ್ಷಣಗಳು ಕಾವ್ಯದ ಧ್ವನಿಸುರುಳಿ 1. ಎದೆಯ ಮಾತು ಪ್ರಶಸ್ತಿ- ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Kannada grammar for kpsc exams ಕೆ.ಪಿ.ಎಸ್. ಸಿ.ಪರೀಕ್ಷೆಗಳಿಗೆ ಕನ್ನಡ ವ್ಯಾಕರಣ

 ಕೆ.ಪಿ.ಎಸ್. ಸಿ ನಡೆಸುವ ಪ್ರತಿಯೊಂದು ಪರೀಕ್ಷೆಗಳಲ್ಲಿ ಕನ್ನಡಕ್ಕೆ ಸಂಬಂಧಪಟ್ಟಂತೆ 35 ಅಂಕಗಳನ್ನು ನಿಗದಿಪಡಿಸಲಾಗಿದೆ. ಪರೀಕ್ಷೆಗೆ ಅನಕೂಲವಾಗಲೆಂದು  ಕನ್ನಡ ವ್ಯಾಕರಣಕ್ಕೆ ಸಂಬಂಧಪಟ್ಟ ಕೆಲವು ಮಾಹಿತಿ ಸಂಗ್ರಹಿಸಿ ಸ್ಪರ್ಧಾರ್ಥಿಗಳ ಅನುಕೂಲಕ್ಕಾಗಿ ನೀಡಲಾಗಿದೆ.ಆಸಕ್ತರು ಇದರ ಸದುಪಯೋಗ ಪಡೆಯಬಹುದು. □  □ □ □ □ □ □ □ □ □ □ □ □ □ □     ತತ್ಸಮ - - - -  - - - - - - - - - ತದ್ಭವ (ಸಂಸ್ಕೃತ )                    (ಕನ್ನಡ ) ■ ನರ್ತಕಿ - ನಚ್ಚಣಿ ■ ಲಕ್ಷ್ಮಿ - ಲಕ್ಕಿ ,ಲಕುಮಿ ■ವೇಷ - ವೇಸ ■ಲೇಪ - ಲಪ್ಪ ■ವರ್ಧಮಾನ - ಬದ್ದವಣ ■ವಜ್ರ - ಬಜ್ಜರ ■ವತ್ಸಲಾ - ಬಚ್ಚಳೆ ■ವಿಸ್ತಾರ - ಬಿತ್ತರ ■ವೃದ್ಧ - ವಡ್ಡ ■ವೃದ್ಧಿ - ಬಡ್ಡಿ ■ವ್ಯಾಖ್ಯಾನ - ವಕ್ಕಣೆ ■ವ್ಯಾಘ್ರ - ಬಗ್ಗ ■ವರ್ಧಕಿ - ಬಡಗಿ ■ವಿದ್ಯೆ - ಬಿಜ್ಜೆ ■ವೈದ್ಯ - ಬೆಜ್ಜ ■ವಿಜ್ಞಾನ - ಬಿನ್ನಣ ■ಶಿಲ್ಪಕ,ಶಿಲ್ಪಿ - ಸಿಂಪಿಗ ,ಚಿಪ್ಪಿಗ ■ಶೂನ್ಯ - ಸೊನ್ನೆ ■ಅವಸ್ಥೆ - ಅವತೆ ■ಅರ್ಹ - ಅರುಹ ■ಅರ್ಗಲ,ಅರ್ಗಲೆ - ಅಗಳಿ,ಅಗುಳಿ (ಚಿಲಕ) ■ಅಂಗುಷ್ಠ - ಅಂಗುಟ ,ಉಂಗುಟ. ■ಆಲಸ್ಯ - ಆಲಸ ■ಆಜ್ಞಾ, ಆಜ್ಞೆ - ಆಣೆ ■ಕ್ರಕಚ - ಗರಗಸ ■ಕ್ಷಣ - ಚಣ ■ಗ್ರಹ - ಗರ ■ಗ್ರಹಣ - ಗರಣ ■ಗ್ರಾಮೀಣ - ಗಾವಿಲ ■ಲಕ್ಷ - ಲಕ್ಕ ■ ಶ್ರೇಷ್ಠಿ -...