Saturday 7 July 2018

moral stories in kannada ಕನ್ನಡ ಸುಭಾಷಿತಗಳು ಕನ್ನಡ ನುಡಿಮುತ್ತು ಗಳು

ತುಂಬು ಗರ್ಭಿಣಿಯೊಬ್ಬಳು ಹೆರಿಗೆ ನೋವಿಂದ ರಸ್ತೆಯಲ್ಲಿ ಸಹಾಯಕ್ಕಾಗಿ ಅಂಗಲಾಚುತ್ತಿರುತ್ತಾಳೆ. ಕಾರಿನಲ್ಲಿ ಬಂದ ಯುವಕನೊಬ್ಬ ನೋಡಿಯೂ ನೋಡದಂತೆ ಕಾರನ್ನು ಮುಂದೆ ಚಲಾಯಿಸುತ್ತಾನೆ. ಅವನ ಕಾರಿನ ಹಿಂದೆ *ಮಾತೃ ದೇವೋಭವ* ಎಂದು ಬರೆದಿರುತ್ತದೆ.
ಮತ್ತೆ ಅದೇ ರಸ್ತೆಯಲ್ಲಿ ಆಟೋ ಒಂದು ಬರುತ್ತದೆ, ಸಹಾಯಕ್ಕಾಗಿ ಆ ಹೆಣ್ಣು ಮಗಳು ಅಂಗಲಾಚುತ್ತಾಳೆ. ಆಕೆಯೊಂದಿಗೆ ಯಾರೂ ಇಲ್ಲವೆಂದು ಗಮನಿಸಿ ನನಗ್ಯಾಕೀ ಉಸಾಬರಿ ಎಂಬಂತೆ ಆಟೋ ಡ್ರೈವರ್ ಹೊರಟು ಹೋಗುತ್ತಾನೆ. *ಗರ್ಭಿಣಿಯರಿಗೆ ಉಚಿತ ಸೇವೆ* ಆಟೋ ಹಿಂದೆ ಹೀಗೆಂದು ಬರೆದಿತ್ತು. ಹೀಗೇ ಹಲವರು ನೋಡಿಯೂ ನೋಡದಂತೆ ಹೊರಟು ಹೋಗುತ್ತಾರೆ. ಒಬ್ಬೊಬ್ಬರ ವಾಹನಗಳ ಹಿಂದೆಯೂ ದೊಡ್ಡ ದೊಡ್ಡ ಸಾಲುಗಳು, *ತಾಯಿಯೇ ದೇವರು*, *ತಾಯಿಗಿಂತ ದೇವರಿಲ್ಲ*, *ಹೆಣ್ಣನ್ನು ರಕ್ಷಿಸಿ;ಹೆಣ್ಣನ್ನು ಗೌರವಿಸಿ*, *ಹೆಣ್ಣೇ ಸಂಸಾರದ ಕಣ್ಣು*, ಇತ್ಯಾದಿ ಬೋಧನೆಗಳು.

ಸ್ವಲ್ಪ ಹೊತ್ತಿನ ನಂತರ ನಾಲ್ಕೈದು ಯುವಕರು ಬೈಕುಗಳಲ್ಲಿ ಗುಂಪಾಗಿ ಕೂಗಾಡುತ್ತಾ ಬರುತ್ತಾರೆ. ಆ ಗರ್ಭಿಣಿ ಹೆಣ್ಣು ಸಹಾಯಕ್ಕಾಗಿ ಒದ್ದಾಡುತ್ತಿರುವುದು ಕಂಡ ಯುವಕರು ಆಕೆಯನ್ನು ಹೇಗೋ ಆಸ್ಪತ್ರೆ ತಲುಪಿಸುತ್ತಾರೆ. ಆಗ ಆಕೆ ಆ ಯುವಕರಿಗೆ ಕೃತಜ್ಞತೆಯಿಂದ ಕೈ ಮುಗಿಯುತ್ತಾಳೆ. ತಮಾಷೆ ಅಂದ್ರೆ ಆ ಯುವಕರ ಬೈಕುಗಳ ಹಿಂದೆ *ಬ್ಯಾಡ್ ಬಾಯ್ಸ್* ಎಂದು ಬರೆದಿತ್ತು.

ಕಥೆಯ ನೀತಿ ಇಷ್ಟೇ ದೊಡ್ಡ ದೊಡ್ಡ ಮಾತುಗಳನ್ನಾಡುವುದರಿಂದ, ಬೋಧಿಸುವುದರಿಂದ ದೊಡ್ಡ ವ್ಯಕ್ತಿಗಳಾಗೋದಿಲ್ಲ, ಒಳ್ಳೊಳ್ಳೇ ಸಂದೇಶಗಳು ವಾಹನಗಳ ಮೇಲೆ ಬರೆಸಿದ ಮಾತ್ರಕ್ಕೆ ಒಳ್ಳೆಯವರಾಗಲ್ಲ. ಅವಶ್ಯಕತೆಯಿರುವವರಿಗೆ ಅಗತ್ಯ ಸಮಯದಲ್ಲಿ ಮಾಡುವ ಸಣ್ಣ-ಪುಟ್ಟ ಸಹಾಯಗಳು ಪರಮ ಶ್ರೇಷ್ಠವಾಗುತ್ತವೆ.

No comments:

Post a Comment

Specialty in Kannada.. firsts in Kannada

 ಕನ್ನಡದ ವಿಶಿಷ್ಟ ಹಾಗೂ ವೈವಿಧ್ಯಮಯ ಸಂಗತಿಗಳು