Skip to main content

ಕನ್ನಡ ಸುಭಾಷಿತಗಳು ಕನ್ನಡ ನುಡಿಮುತ್ತು ಗಳು kannada subhashitagalu Kannada nudi muttugalu






1. ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು.---- ಡಾ.ಬಿ.ಆರ್.ಅಂಬೇಡ್ಕರ್.
2. ಪರರನ್ನು ಗೌರವಿಸುವುದನ್ನು ಕಲಿಯದಿದ್ದರೆ ನಾವೆಂದೂ ದೊಡ್ಡವರಾಗುವುದಿಲ್ಲ.----ವಲ್ಲಭ ಭಾಯಿ ಪಟೇಲ್.
3. ಜಗತ್ತಿನಲ್ಲಿ ಅತ್ಯಂತ ಬಲಯುತ ಶಕ್ತಿ ಎಂದರೆ ಪ್ರೀತಿ. ಪ್ರೀತಿ ಇಲ್ಲದ ಜೀವನ ಸಾವಿಗೆ ಸಮ.---ಮಹಾತ್ಮಾ ಗಾಂಧಿ.
4. ಬೇಟೆಯ ನಂತರ,ಯುದ್ಧದ ವೇಳೆ ಮತ್ತು ಚುನಾವಣೆಗೆ ಮುನ್ನ ಹೇಳುವಷ್ಟು ಸುಳ್ಳುಗಳನ್ನು ಜನ ಇನ್ಯಾವ ಹೊತ್ತಲ್ಲೂ ಹೇಳುವುದಿಲ್ಲ. ----ಬಿಸ್ಮಾರ್ಕ್.
5. ಸತ್ಯಕ್ಕೆ ಒಂದು ಬಣ್ಣ. ಸುಳ್ಳಿಗೆ ನಾನಾ ಬಣ್ಣ. ----ಲ್ಯಾಟಿನ್ ಗಾದೆ.
6. ಶಕ್ತಿ ದೈಹಿಕ ಬಲದಿಂದ ಬರುವುದಿಲ್ಲ. ಅದು ಬರುವುದು ಅದಮ್ಯವಾದ ಇಚ್ಛಾಶಕ್ತಿಯಿಂದ.----ಮಹಾತ್ಮಾ ಗಾಂಧಿ.
7. ಶ್ರದ್ಧೆ ಇಲ್ಲದೆ ಮಾಡುವ ಯಾವ ಕೆಲಸವೂ ಮಹಾನ್ ಆಗುವುದಿಲ್ಲ. ----ಎಮರ್ಸನ್.
8. ಜೀವನದಲ್ಲಿ ಪ್ರಾಮಾಣಿಕತೆಗಿಂತ ಐಶ್ವರ್ಯ ದೊಡ್ಡದಲ್ಲ.----ಜಾನ್ ರಸ್ಕಿನ್.
9. ಅರ್ಹರ ಮುಂದೆ ಕೊಂಕಿಲ್ಲದ ತಪ್ಪೊಪ್ಪಿಗೆ , ಮತ್ತೆ ಮಾಡೆನೆಂಬ ಭರವಸೆ ಇವೇ ಪರಿಶುದ್ಧವಾದ ಪಶ್ಚಾತ್ತಾಪ. ----ಮಹಾತ್ಮಾ ಗಾಂಧಿ.
10. ಸೌಂದರ್ಯವೇ ಸತ್ಯ. ಸತ್ಯವೇ ಸೌಂದರ್ಯ. ಬದುಕಿಗೆ ಬೇಕಾಗಿರುವುದು ಇದೇ.---- ಜಾನ್ ಕೀಟ್ಸ್.
11. ತಾಳ್ಮೆ ಕಹಿಯಾದರೂ ಅದರ ಫವ ಸಿಹಿ. ---- ರೂಸೊ.
12. ತೆಗೆದುಕೊಳ್ಳುವುದಕ್ಕಿಂತ ಮೊದಲು ಕೊಡು.ಅದರಿಂದ ನಿನಗೆ ಅತ್ಯಂತ ಒಳ್ಳೆಯದೇ ಸಿಕ್ಕೀತು.----ಸ್ವಾಮಿ ರಂಗನಾಥಾನಂದ.
13. ದುಃಖಿಸಬೇಡಿ.ನೀವು ಕಳೆದುಕೊಂಡದ್ದು ಇನ್ನೊಂದು ರೂಪದಲ್ಲಿ ನಿಮ್ಮೆದುರು ಬಂದೇ ಬರುತ್ತದೆ. ---- ಜಲಾಲುದ್ದೀನ್ ರೂಮಿ.
14. ಅನುಭವವೆಂದರೆ ತಪ್ಪುಗಳನ್ನು ಮಾಡುವುದು ಮತ್ತು ಅದರಿಂದ ಕಲಿಯುವುದು.---- ಬಿಲ್ ಆಕ್ಮನ್.
15. ದಾರಿ ಗೊತ್ತಿರುವವನು , ದಾರಿಯಲ್ಲಿ ನಡೆಯುವವನು ಮತ್ತು ದಾರಿ ತೋರಿಸುವವನೇ ನಿಜವಾದ ನಾಯಕ. ---- ಜಾನ್ ಮ್ಯಾಕ್ಸ್ ವೆಲ್.
16. ಆಡಳಿತ ಕೆಲಸವನ್ನು ಸರಿ ಮಾಡಿಸುತ್ತದೆ.ನಾಯಕತ್ವ ಸರಿಯಾದ ಕೆಲಸವನ್ನು ಮಾಡಿಸುತ್ತದೆ.-----ಪೀಟರ್ ಡ್ರೆಕರ್.
17. ತಪ್ಪುಗಳನ್ನು ಹುಡುಕಬೇಡಿ; ಪರಿಹಾರಗಳನ್ನು ಹುಡುಕಿ. ----ಹೆನ್ರಿ ಫೋರ್ಡ್.
18. ಹುಟ್ಟು ಹಾಕದೆ ಕುಳಿತವನಿಗೆ ಮಾತ್ರ ದೋಣಿಯಲ್ಲಿ ತೂತು ಕೊರೆಯಲು ಸಮಯವಿರುತ್ತದೆ.---- ಜೀನ್ ಪಾಲ್ ಸಾರ್ತ್ರೆ.
19. ನೀವು ಚಟುವಟಿಕೆಯಿಂದ ಇದ್ದಾಗ ಎಲ್ಲ ಕೆಲಸಗಳೂ ಸುಲಭ.ನೀವು ಸೋಮಾರಿಯಾಗಿದ್ದಾಗ ಎಲ್ಲಾ ಕೆಲಸವೂ ಕಷ್ಟ. ----ಸ್ವಾಮಿ ವಿವೇಕಾನಂದ.
20. ನಿಮ್ಮ ಜೀವನದಲ್ಲಿ ಕೆಲವರು ಆಶೀರ್ವಾದದಂತೆ ಬರುತ್ತಾರೆ; ಇನ್ನು ಕೆಲವರು ಪಾಠದಂತೆ ಬರುತ್ತಾರೆ ----ಮದರ್ ತೆರೆಸಾ.
21. ಕಣ್ಣಿದ್ದು ದೂರದೃಷ್ಟಿ ಇಲ್ಲದಿರುವುದು ,ಕುರುಡರಾಗಿರುವುದಕ್ಕಿಂತ ಕೆಟ್ಟದ್ದು.----- ಹೆಲನ್ ಕೆಲ್ಲರ್.
22. ಸುಖದ ದಾಹ ಮನೆಯೊಳಗೆ ಅತಿಥಿಯಂತೆ ಬರುತ್ತದೆ, ಬಳಿಕ ಅತಿಥೇಯನಾಗುತ್ತದೆ.ಕೊನೆಗೆ ಮನೆಯನ್ನೇ ಆಳುತ್ತದೆ.-----ಗಲೀಲ್ ಗಿಬ್ರಾನ್.
23. ಸಾಮಾನ್ಯವಾಗಿ ನಾಳೆ ಎನ್ನುವುದು ಇಡೀ ವಾರದಲ್ಲಿ ಪುರುಸೊತ್ತೇ ಇಲ್ಲದ ದಿನ. -----ಸ್ಪೇನ್ ಗಾದೆ.
24. ಸತ್ಯವನ್ನು ಹುಡುಕಾಡುವವನನ್ನು ನಂಬಿ; ಸತ್ಯವನ್ನು ಕಂಡುಹಿಡಿದವನನ್ನು ಸಂಶಯಿಸಿ.----ಆಂಡ್ರೆ ಗೈಡ್.
25. ಬರಿಹೊಟ್ಟೆಯಲ್ಲಿ ಇರುವವನಿಗೆ ಆಹಾರವೇ ದೇವರು.---- ಮಹಾತ್ಮಾ ಗಾಂಧಿ.

Comments

Popular posts from this blog

ಡಾ.ಸತ್ಯಾನಂದ ಪಾತ್ರೋಟ Dr.satyananda patrota

• ಡಾ.ಸತ್ಯಾನಂದ ಪಾತ್ರೋಟ • ಜನನ- ಬಾಗಲಕೋಟೆ • ವಿದ್ಯಾಭ್ಯಾಸ ~ಎಂ.ಎ., ಪಿ.ಎಚ್.ಡಿ. • ಉದ್ಯೋಗ ~ ಬಾಗಲಕೋಟೆಯ ಎಸ್.ಬಿ.ಪಾಟೀಲ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಅಧ್ಯಾಪಕರು. • ಕವನ ಸಂಕಲನಗಳು 1. ಕರಿನೆಲದ ಕಲೆಗಳು 2. ಜಾಜಿ ಮಲ್ಲಿಗೆ 3. ಕಲ್ಲಿಗೂ ಗೊತ್ತಿರುವ ಕಥೆ. 4. ಕರಿಯ ಕಟ್ಟಿದ ಕವನ 5. ನನ್ನ ಕನಸಿನ ಹುಡುಗಿ 6. ನದಿಗೊಂದು ಕನಸು ಮತ್ತು ಅವಳು ನಾಟಕಗಳು 1. ನಮಗ ಯಾರು ಇಲ್ಲೋ ಎಪ್ಪಾ ಸಾಕ್ಷಿ 2. ಮತ್ತೊಬ್ಬ ಏಕಲವ್ಯ ಪ್ರಬಂಧ ಸಂಕಲನ 1. ಒಂದಿಷ್ಟು ಕ್ಷಣಗಳು ಕಾವ್ಯದ ಧ್ವನಿಸುರುಳಿ 1. ಎದೆಯ ಮಾತು ಪ್ರಶಸ್ತಿ- ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಸವರ್ಣ ದೀರ್ಘ ಸಂಧಿ. ಸವರ್ಣ ದೀರ್ಘ ಸಂಧಿ ಉದಾಹರಣೆಗಳು savarna dhirgha sandhi. Savarna dhirgha sandhi examples

ಸವರ್ಣ ದೀರ್ಘ ಸಂಧಿ. [ ] ಪೂರ್ವ ಪದದ ಅಂತ್ಯ ಸ್ವರ ಮತ್ತು ಉತ್ತರ ಪದದ ಆರಂಭದ ಸ್ವರ ಒಂದೇ ರೀತಿಯ ವರ್ಣವಾಗಿದ್ದರೆ , ಸಂಧಿಕಾರ್ಯ ನಡೆಯುವಾಗ ಅದೇ ಸ್ವರದ ದೀರ್ಘ ಸ್ವರವು ಆದೇಶವಾಗಿರುವುದು ಕಂಡು ಬರುತ್ತದೆ. [ ] ಸಂಧಿಕಾರ್ಯ ನಡೆಯುವಾಗ ಒಂದೇ ರೀತಿಯ ಸ್ವರಾಕ್ಷರಗಳು ಪರಸ್ಪರ ಸೇರಿ ದೀರ್ಘ ಸ್ವರ ಆದೇಶವಾದರೆ ಅಂತಹ ಸಂಧಿಯನ್ನು "ಸವರ್ಣ ದೀರ್ಘ ಸಂಧಿ "ಎಂದು ಕರೆಯುತ್ತಾರೆ. [ ] ಸವರ್ಣಾಕ್ಷರಗಳಿಗೆ ಸವರ್ಣಾಕ್ಷರಗಳ ಪರವಾಗಿ ಸವರ್ಣ ದೀರ್ಘಾಕ್ಷರಗಳು ಬಂದರೆ ಸವರ್ಣ ದೀರ್ಘ ಸಂಧಿ. [ ] ಉದಾಹರಣೆಗೆ ಪೂರ್ವ ಪದ + ಉತ್ತರ ಪದ = ಸಂಧಿಪದ 1. ರವಿ + ಇಂದ್ರ = ರವೀಂದ್ರ ( ಇ+ಇ= ಈ) 2. ದೇವ+ ಆಲಯ= ದೇವಾಲಯ. (ಅ+ಆ=ಆ) 3. ಗುರು+ ಉಪದೇಶ =ಗುರೂಪದೇಶ (ಉ+ಉ=ಊ) 4. ಮಹಾ+ ಆತ್ಮ = ಮಹಾತ್ಮ (ಆ+ಆ=ಆ) 5. ಗಿರಿ+ ಇಂದ್ರ = ಗಿರೀಂದ್ರ 6. ಮುನಿ+ ಇಂದ್ರ =ಮುನೀಂದ್ರ. 7. ಅಲ್ಪ + ಅಕ್ಷರ =ಅಲ್ಪಾಕ್ಷರ. 8. ವಿದ್ಯ+ ಅರ್ಜನೆ=ವಿದ್ಯಾರ್ಜನೆ. 9. ರಾಕ್ಷಸ + ಅಧಿಪತಿ= ರಾಕ್ಷಸಾಧಿಪತಿ. 10. ಸೀತ+ಅನ್ವೇಷಣೆ= ಸೀತಾನ್ವೇಷಣೆ. 11. ಪಂಚ+ಆಸ್ಯ=ಪಂಚಾಸ್ಯ. 12. ಶಾಸಕ+ಅಂಗ=ಶಾಸಕಾಂಗ. 13. ಅಭಯ+ಅರಣ್ಯ =ಅಭಯಾರಣ್ಯ. 14. ಉಭಯ+ಅರಣ್ಯ =ಉಭಯಾರಣ್ಯ 15. ವಸ್ರ್ತ + ಆಭರಣ= ವಸ್ತ್ರಾಭರಣ. 16. ಗೌರಿ+ಈಶ =ಗೌರೀಶ. 17. ಕಟು+ಉಕ್ತಿ=ಕಟೂಕ್ತಿ. 18. ಕೃಷ್ಣ +ಅಜಿನ=ಕೃಷ್ಣಾಜಿನ. 19. ಪೀತ+ಅಂಬರ=ಪೀತಾಂಬರ. 20. ಏಕ+ಆಸ...

ಕನ್ನಡದ ಮೊದಲುಗಳು ಕನ್ನಡದ ಬಗ್ಗೆ ಪ್ರಮುಖ ಮಾಹಿತಿಗಳು