Skip to main content

kannada subhashitagalu Kannada nudi muttugalu ಕನ್ನಡ ಸುಭಾಷಿತಗಳು ಕನ್ನಡ ನುಡಿಮುತ್ತು ಗಳು



*ತುಳಿದಷ್ಟು ಮತ್ತೆ ಮತ್ತೆ ಚಿಗುರುವ ಗರಿಕೆಯ ಹುಲ್ಲಾಗಬೇಕು,*
*ಜರಿದಷ್ಟು ಜಗಮಗಿಸುವ ದೀಪದ ಬೆಳಕಾಗಬೇಕು,*
*ತೂರಿದಷ್ಟು ಎತ್ತರದ ಎತ್ತರಕ್ಕೆ ಹಾರಾಡುವ ಗಾಳಿಪಟವಾಗಬೇಕು,*
*ಕೈ ಬಿಟ್ಟಷ್ಟು ಮತ್ತೆಂದು ಕೈಗೆ ಸಿಗದ ಪಾದರಸವಾಗಬೇಕು,*
*ಇವೆಲ್ಲವೂ ಮೀರಿ ನಾವು ನಾವಾಗಿಯೇ ನಮ್ಮತನದ ಅಡಿಯಲ್ಲಿಯೇ ಬೆಳಗಬೇಕು ಬೆಳಕ ಚಲ್ಲಬೇಕು..!*






🍀 *ಖುಷಿ ,ಸಂತೋಷ ಎನ್ನುವುದು* *ಪ್ರತಿಯೊಬ್ಬ ವ್ಯಕ್ತಿಯ ಒಳಗಿರುವ ಅಕ್ಷಯ ಪಾತ್ರೆ*. *ಅದು ಎಂದಿಗೂ ಬರಿದಾಗುವುದಿಲ್ಲ.* *ತನ್ನಲ್ಲಿರುವ ಖುಷಿಯನ್ನು ಇತರರೊಂದಿಗೆ ಹಂಚುವ* *ಮೂಲಕ* , *ಇನ್ನೊಬ್ಬರ* *ಮೊಗದಲ್ಲೂ ಆ ಸಂತಸವನ್ನು* *ಕಾಣಬಹುದು.

ಎಲ್ಲಾ ಕಷ್ಟಗಳಿಗೂ, ಸಮಸ್ಯೆಗಳಿಗೂ ಎರಡು ಔಷದಿಗಳಿವೆ, ಒಂದು ದುಡಿಮೆ ಮತ್ತೊಂದು ತಾಳ್ಮೆ.
ಇವೆರಡು ನಿಮ್ಮಲ್ಲಿರಲಿ.




*ಬದುಕಿನಲ್ಲಿ ಕನ್ನಡಿ ಮತ್ತು ನೆರಳಿನಂಥ ಗೆಳೆಯರು ಬೇಕು..!*

*ಕನ್ನಡಿ ಯಾವತ್ತೂ ಸುಳ್ಳು ಹೇಳುವುದಿಲ್ಲ..*
*ನೆರಳು ಯಾವತ್ತೂ ನಮ್ಮನ್ನು ಬಿಟ್ಟು ಹೋಗುವುದಿಲ್ಲ..!*



ಯಾವಾಗ ತಾಯಿ ಸಂತೋಷವಾಗಿರುತ್ತಾಳೋ ಆಗ ಕುಟುಂಬ ಆನಂದವಾಗಿರುತ್ತದೆ. ಯಾವಾಗ ಕುಟುಂಬ ಸಂತೋಷವಾಗಿರುತ್ತದೆಯೋ ಆಗ ಇಡೀ ರಾಷ್ಟ್ರವೇ ಆನಂದವಾಗಿರುತ್ತದೆ..
✍🏻ಡಾ.ಎ.ಪಿ.ಜೆ.ಅಬ್ದುಲ್ ಕಲಾಂ.

ಬದುಕಲ್ಲಿ ನಮ್ಮನ್ನು ನಾವು ಗುರುತಿಸಿಕೊಳ್ಳುವಂತೆ ಬದುಕೋದು ಸ್ವಾಭಿಮಾನದ ಜೀವನ. ನಮ್ಮನ್ನ ಮತ್ತೊಬ್ಬರು ಗುರುತಿಸುವಂತೆ ಬದುಕುವುದು ಅಭಿಮಾನದ ಸನ್ಮಾನ".*

🌈ದೂರ ಇದ್ದ ತಕ್ಷಣ ಸಂಬಂಧ ಹಾಳುಗುವುದಿಲ್ಲ.*
*ಹತ್ತಿರ ಇದ್ದ ತಕ್ಷಣ ಸಂಬಂಧ ಬೇಸುಯುದಿಲ್ಲ.*
*ಯಾರು ಎಷ್ಟು ಚೆನ್ನಾಗಿ ಒಬ್ಬರನ್ನೊಬ್ಬರು ಅರ್ಥಮಾಡಿಕೊಂಡಿದ್ದರೆ ಅನ್ನುವ ಮೇಲೆ ಸಂಬಂಧಗಳು ಗಟ್ಟಿಯಾಗುತ್ತದೆ.🌈*


ಜೀವನ ಹೇಗಿರಬೇಕು ಅಂದರೆ ನಾವು ಹುಟ್ಟಿದರೆ ತಾಯಿ ಸಂತೋಷ ಪಡುವಂತಿರಬೇಕು.
ಬೆಳೆದರೆ ತಂದೆ ಆನಂದಿಸುವಂತಿರಬೇಕು
ಬಾಳಿದರೆ‌ ಸಮಾಜ ಸಂಭ್ರಮಿಸುವಂತಿರಬೇಕು
ಸತ್ತರೆ ಸ್ಮಶಾನ ಕೂಡ ಕಣ್ಣೀರಿಡುವಂತಿಬೇಕು.....

Comments

Popular posts from this blog

ಡಾ.ಸತ್ಯಾನಂದ ಪಾತ್ರೋಟ Dr.satyananda patrota

• ಡಾ.ಸತ್ಯಾನಂದ ಪಾತ್ರೋಟ • ಜನನ- ಬಾಗಲಕೋಟೆ • ವಿದ್ಯಾಭ್ಯಾಸ ~ಎಂ.ಎ., ಪಿ.ಎಚ್.ಡಿ. • ಉದ್ಯೋಗ ~ ಬಾಗಲಕೋಟೆಯ ಎಸ್.ಬಿ.ಪಾಟೀಲ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಅಧ್ಯಾಪಕರು. • ಕವನ ಸಂಕಲನಗಳು 1. ಕರಿನೆಲದ ಕಲೆಗಳು 2. ಜಾಜಿ ಮಲ್ಲಿಗೆ 3. ಕಲ್ಲಿಗೂ ಗೊತ್ತಿರುವ ಕಥೆ. 4. ಕರಿಯ ಕಟ್ಟಿದ ಕವನ 5. ನನ್ನ ಕನಸಿನ ಹುಡುಗಿ 6. ನದಿಗೊಂದು ಕನಸು ಮತ್ತು ಅವಳು ನಾಟಕಗಳು 1. ನಮಗ ಯಾರು ಇಲ್ಲೋ ಎಪ್ಪಾ ಸಾಕ್ಷಿ 2. ಮತ್ತೊಬ್ಬ ಏಕಲವ್ಯ ಪ್ರಬಂಧ ಸಂಕಲನ 1. ಒಂದಿಷ್ಟು ಕ್ಷಣಗಳು ಕಾವ್ಯದ ಧ್ವನಿಸುರುಳಿ 1. ಎದೆಯ ಮಾತು ಪ್ರಶಸ್ತಿ- ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಸವರ್ಣ ದೀರ್ಘ ಸಂಧಿ. ಸವರ್ಣ ದೀರ್ಘ ಸಂಧಿ ಉದಾಹರಣೆಗಳು savarna dhirgha sandhi. Savarna dhirgha sandhi examples

ಸವರ್ಣ ದೀರ್ಘ ಸಂಧಿ. [ ] ಪೂರ್ವ ಪದದ ಅಂತ್ಯ ಸ್ವರ ಮತ್ತು ಉತ್ತರ ಪದದ ಆರಂಭದ ಸ್ವರ ಒಂದೇ ರೀತಿಯ ವರ್ಣವಾಗಿದ್ದರೆ , ಸಂಧಿಕಾರ್ಯ ನಡೆಯುವಾಗ ಅದೇ ಸ್ವರದ ದೀರ್ಘ ಸ್ವರವು ಆದೇಶವಾಗಿರುವುದು ಕಂಡು ಬರುತ್ತದೆ. [ ] ಸಂಧಿಕಾರ್ಯ ನಡೆಯುವಾಗ ಒಂದೇ ರೀತಿಯ ಸ್ವರಾಕ್ಷರಗಳು ಪರಸ್ಪರ ಸೇರಿ ದೀರ್ಘ ಸ್ವರ ಆದೇಶವಾದರೆ ಅಂತಹ ಸಂಧಿಯನ್ನು "ಸವರ್ಣ ದೀರ್ಘ ಸಂಧಿ "ಎಂದು ಕರೆಯುತ್ತಾರೆ. [ ] ಸವರ್ಣಾಕ್ಷರಗಳಿಗೆ ಸವರ್ಣಾಕ್ಷರಗಳ ಪರವಾಗಿ ಸವರ್ಣ ದೀರ್ಘಾಕ್ಷರಗಳು ಬಂದರೆ ಸವರ್ಣ ದೀರ್ಘ ಸಂಧಿ. [ ] ಉದಾಹರಣೆಗೆ ಪೂರ್ವ ಪದ + ಉತ್ತರ ಪದ = ಸಂಧಿಪದ 1. ರವಿ + ಇಂದ್ರ = ರವೀಂದ್ರ ( ಇ+ಇ= ಈ) 2. ದೇವ+ ಆಲಯ= ದೇವಾಲಯ. (ಅ+ಆ=ಆ) 3. ಗುರು+ ಉಪದೇಶ =ಗುರೂಪದೇಶ (ಉ+ಉ=ಊ) 4. ಮಹಾ+ ಆತ್ಮ = ಮಹಾತ್ಮ (ಆ+ಆ=ಆ) 5. ಗಿರಿ+ ಇಂದ್ರ = ಗಿರೀಂದ್ರ 6. ಮುನಿ+ ಇಂದ್ರ =ಮುನೀಂದ್ರ. 7. ಅಲ್ಪ + ಅಕ್ಷರ =ಅಲ್ಪಾಕ್ಷರ. 8. ವಿದ್ಯ+ ಅರ್ಜನೆ=ವಿದ್ಯಾರ್ಜನೆ. 9. ರಾಕ್ಷಸ + ಅಧಿಪತಿ= ರಾಕ್ಷಸಾಧಿಪತಿ. 10. ಸೀತ+ಅನ್ವೇಷಣೆ= ಸೀತಾನ್ವೇಷಣೆ. 11. ಪಂಚ+ಆಸ್ಯ=ಪಂಚಾಸ್ಯ. 12. ಶಾಸಕ+ಅಂಗ=ಶಾಸಕಾಂಗ. 13. ಅಭಯ+ಅರಣ್ಯ =ಅಭಯಾರಣ್ಯ. 14. ಉಭಯ+ಅರಣ್ಯ =ಉಭಯಾರಣ್ಯ 15. ವಸ್ರ್ತ + ಆಭರಣ= ವಸ್ತ್ರಾಭರಣ. 16. ಗೌರಿ+ಈಶ =ಗೌರೀಶ. 17. ಕಟು+ಉಕ್ತಿ=ಕಟೂಕ್ತಿ. 18. ಕೃಷ್ಣ +ಅಜಿನ=ಕೃಷ್ಣಾಜಿನ. 19. ಪೀತ+ಅಂಬರ=ಪೀತಾಂಬರ. 20. ಏಕ+ಆಸ...

ಕನ್ನಡದ ಮೊದಲುಗಳು ಕನ್ನಡದ ಬಗ್ಗೆ ಪ್ರಮುಖ ಮಾಹಿತಿಗಳು