Skip to main content

moral stories in kannada ಕನ್ನಡದ ನೀತಿ ಕತೆಗಳು

“ಕೋಪ ಬರುತ್ತಿದೆ”

ಎಂದು ಮಗ ಪ್ರತಿ ಸಲ ಹೇಳಿದಾಗ…

ಗೋಡೆಗೆ ಮೊಳೆ ಹೊಡಿ ಎನ್ನುತ್ತಾನೆ ತಂದೆ!

ಯಾಕೆ ಗೊತ್ತಾ?

ಗೋಡೆಗೆ ಹೊಡೆದ ಮೊಳೆಗಳು…
ಅದ್ಭುತವಾದ ಜೀವನ ಸತ್ಯ.

ಮಗನೊಬ್ಬನಿಗೆ…
ತಂದೆ ಕೆಲವು ಮೊಳೆಗಳನ್ನು ಕೊಟ್ಟು…

ನಿನಗೆ ನಿತ್ಯ ಎಷ್ಟು ಮಂದಿಯ ಮೇಲೆ ಕೋಪ ಬರುತ್ತದೋ ಅಷ್ಟು ಮೊಳೆಗಳನ್ನು ಗೋಡೆಗೆ ಹೊಡಿ ಎಂದು ಹೇಳುತ್ತಾನೆ..!

ಮೊದಲ ದಿನ 20, ಬಳಿಕ 15, ಮೂರನೇ ದಿನ 10 ಹೀಗೆ..

ತನ್ನ ಕೈಯಲ್ಲಿ ಇರುವ ಮೊಳೆಗಳನ್ನೆಲ್ಲಾ ಗೋಡೆಗೆ ಹೊಡೆದುಬಿಟ್ಟ ಮಗ.

ಮೊಳೆಗಳು ಮುಗಿದ ಕೂಡಲೆ…

ಮಗ ತಂದೆ ಬಳಿ ಬಂದು ಅಪ್ಪಾ ನೀವು ಕೊಟ್ಟ ಮೊಳೆಗಳೆಲ್ಲಾ ಮುಗಿದುಹೋದವು ಎಂದ.

ಓ…

ಅಂದರೆ ನಿನಗೆ ತುಂಬಾ ಮಂದಿ ಮೇಲೆ ಕೋಪ ಬಂದಂತಿದೆ..
ಎನ್ನುತ್ತಾರೆ ತಂದೆ..!

ಆ…ಆದರೆ…

ನಾಳೆಯಿಂದ ನಿತ್ಯ, ಗೋಡೆಗೆ ನೀನು ಹೊಡೆದ ಕೆಲವು ಮೊಳೆಗಳನ್ನು ತೆಗೆದುಬಿಡು ಎಂದು ಮಗನಿಗೆ ತಂದೆ ಹೇಳುತ್ತಾನೆ…

ತಂದೆ ಹೇಳಿದಂತೆ…

ಕಷ್ಟಪಟ್ಟು ಗೋಡೆಗೆ ಹೊಡೆದ ಮೊಳೆಗಳನ್ನೆಲ್ಲಾ ತೆಗೆದ ಮಗ..

ಕೆಲವು ಮೊಳೆಗಳನ್ನು ತೆಗೆಯಲು ತುಂಬಾ ಕಷ್ಟಪಟ್ಟ.

ಏನಾಯಿತು ಎಂದು ಮಗನನ್ನು ಕೇಳಿದ ತಂದೆ…

ಗೋಡೆಗೆ ಹೊಡೆದ ಮೊಳೆಗಳನ್ನೆಲ್ಲಾ ತೆಗೆದುಬಿಟ್ಟೆ ಅಪ್ಪ ಎಂದ ಮಗ.

ಹಾಗಿದ್ದರೆ ಗೋಡೆ ಹೇಗಿದೆ? ಮೊಳೆಗಳೇನೋ ತೆಗೆದುಬಿಟ್ಟೆ..

ಆದರೆ ಇದರಿಂದ ಗೋಡೆಗೆ ಆದ ರಂಧ್ರಗಳು ಮಾತ್ರ ಹಾಗೆಯೇ ಇವೆ ಎಂದ ಮಗ.

ಆಗ ತಂದೆ…ಮಗನೊಂದಿಗೆ.. “ನೋಡಿದೆಯಾ”.. ಮೊಳೆಗಳನ್ನು ಹೊಡೆಯುವಾಗ ಸುಲಭವಾಗಿ ಹೊಡೆದೆ..!

ತೆಗೆಯುವಾಗ ತುಂಬಾ ಕಷ್ಟಪಟ್ಟೆ.
ಮೊಳೆಗಳನ್ನು ತೆಗೆದ ರಂಧ್ರಗಳು ಮಾತ್ರ ಹಾಗೆಯೇ ಇವೆ..

ಎಂದರೆ ನಮಗೆ ತುಂಬಾ ಮಂದಿ ಮೇಲೆ ಕೋಪ ಬರುತ್ತದೆ,

ಆ ಕೋಪದಲ್ಲಿ ಅವರ ಮನಸ್ಸನ್ನು ಗಾಯಪಡಿಸುತ್ತೇವೆ.. (ಅಂದರೆ ಮೊಳೆ ಹೊಡೆಯುತ್ತೇವೆ), ಬಳಿಕ sorry ಹೇಳುತ್ತೇವೆ (ಅಂದರೆ ಹೊಡೆದ ಮೊಳೆಗಳನ್ನು ತೆಗೆಯುತ್ತೇವೆ), ಆದರೆ sorry ಹೇಳಿಬಿಟ್ಟರೆ ಅವರ ಮನಸ್ಸಿಗೆ ಆದ ಗಾಯ (ಅಂದರೆ ರಂಧ್ರಗಳನ್ನು) ಮಾತ್ರ ಮುಚ್ಚಲು ಸಾಧ್ಯವಿಲ್ಲ.

ಹಾಗಾಗಿಯೇ ಮಾತುಗಳು-ಬುಲೆಟ್‌ನಂತಹವು, ಅಳೆದು ತೂಗಿ ಮಾತನಾಡಬೇಕು, ಇತರರನ್ನು ನೋಯಿಸದಂತೆ ಮಾತನಾಡಬೇಕು –

*ಪ್ರೀತಿಯಿಂದ ಮಾತನಾಡೋಣ.*

Comments

Popular posts from this blog

ಡಾ.ಸತ್ಯಾನಂದ ಪಾತ್ರೋಟ Dr.satyananda patrota

• ಡಾ.ಸತ್ಯಾನಂದ ಪಾತ್ರೋಟ • ಜನನ- ಬಾಗಲಕೋಟೆ • ವಿದ್ಯಾಭ್ಯಾಸ ~ಎಂ.ಎ., ಪಿ.ಎಚ್.ಡಿ. • ಉದ್ಯೋಗ ~ ಬಾಗಲಕೋಟೆಯ ಎಸ್.ಬಿ.ಪಾಟೀಲ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಅಧ್ಯಾಪಕರು. • ಕವನ ಸಂಕಲನಗಳು 1. ಕರಿನೆಲದ ಕಲೆಗಳು 2. ಜಾಜಿ ಮಲ್ಲಿಗೆ 3. ಕಲ್ಲಿಗೂ ಗೊತ್ತಿರುವ ಕಥೆ. 4. ಕರಿಯ ಕಟ್ಟಿದ ಕವನ 5. ನನ್ನ ಕನಸಿನ ಹುಡುಗಿ 6. ನದಿಗೊಂದು ಕನಸು ಮತ್ತು ಅವಳು ನಾಟಕಗಳು 1. ನಮಗ ಯಾರು ಇಲ್ಲೋ ಎಪ್ಪಾ ಸಾಕ್ಷಿ 2. ಮತ್ತೊಬ್ಬ ಏಕಲವ್ಯ ಪ್ರಬಂಧ ಸಂಕಲನ 1. ಒಂದಿಷ್ಟು ಕ್ಷಣಗಳು ಕಾವ್ಯದ ಧ್ವನಿಸುರುಳಿ 1. ಎದೆಯ ಮಾತು ಪ್ರಶಸ್ತಿ- ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಸವರ್ಣ ದೀರ್ಘ ಸಂಧಿ. ಸವರ್ಣ ದೀರ್ಘ ಸಂಧಿ ಉದಾಹರಣೆಗಳು savarna dhirgha sandhi. Savarna dhirgha sandhi examples

ಸವರ್ಣ ದೀರ್ಘ ಸಂಧಿ. [ ] ಪೂರ್ವ ಪದದ ಅಂತ್ಯ ಸ್ವರ ಮತ್ತು ಉತ್ತರ ಪದದ ಆರಂಭದ ಸ್ವರ ಒಂದೇ ರೀತಿಯ ವರ್ಣವಾಗಿದ್ದರೆ , ಸಂಧಿಕಾರ್ಯ ನಡೆಯುವಾಗ ಅದೇ ಸ್ವರದ ದೀರ್ಘ ಸ್ವರವು ಆದೇಶವಾಗಿರುವುದು ಕಂಡು ಬರುತ್ತದೆ. [ ] ಸಂಧಿಕಾರ್ಯ ನಡೆಯುವಾಗ ಒಂದೇ ರೀತಿಯ ಸ್ವರಾಕ್ಷರಗಳು ಪರಸ್ಪರ ಸೇರಿ ದೀರ್ಘ ಸ್ವರ ಆದೇಶವಾದರೆ ಅಂತಹ ಸಂಧಿಯನ್ನು "ಸವರ್ಣ ದೀರ್ಘ ಸಂಧಿ "ಎಂದು ಕರೆಯುತ್ತಾರೆ. [ ] ಸವರ್ಣಾಕ್ಷರಗಳಿಗೆ ಸವರ್ಣಾಕ್ಷರಗಳ ಪರವಾಗಿ ಸವರ್ಣ ದೀರ್ಘಾಕ್ಷರಗಳು ಬಂದರೆ ಸವರ್ಣ ದೀರ್ಘ ಸಂಧಿ. [ ] ಉದಾಹರಣೆಗೆ ಪೂರ್ವ ಪದ + ಉತ್ತರ ಪದ = ಸಂಧಿಪದ 1. ರವಿ + ಇಂದ್ರ = ರವೀಂದ್ರ ( ಇ+ಇ= ಈ) 2. ದೇವ+ ಆಲಯ= ದೇವಾಲಯ. (ಅ+ಆ=ಆ) 3. ಗುರು+ ಉಪದೇಶ =ಗುರೂಪದೇಶ (ಉ+ಉ=ಊ) 4. ಮಹಾ+ ಆತ್ಮ = ಮಹಾತ್ಮ (ಆ+ಆ=ಆ) 5. ಗಿರಿ+ ಇಂದ್ರ = ಗಿರೀಂದ್ರ 6. ಮುನಿ+ ಇಂದ್ರ =ಮುನೀಂದ್ರ. 7. ಅಲ್ಪ + ಅಕ್ಷರ =ಅಲ್ಪಾಕ್ಷರ. 8. ವಿದ್ಯ+ ಅರ್ಜನೆ=ವಿದ್ಯಾರ್ಜನೆ. 9. ರಾಕ್ಷಸ + ಅಧಿಪತಿ= ರಾಕ್ಷಸಾಧಿಪತಿ. 10. ಸೀತ+ಅನ್ವೇಷಣೆ= ಸೀತಾನ್ವೇಷಣೆ. 11. ಪಂಚ+ಆಸ್ಯ=ಪಂಚಾಸ್ಯ. 12. ಶಾಸಕ+ಅಂಗ=ಶಾಸಕಾಂಗ. 13. ಅಭಯ+ಅರಣ್ಯ =ಅಭಯಾರಣ್ಯ. 14. ಉಭಯ+ಅರಣ್ಯ =ಉಭಯಾರಣ್ಯ 15. ವಸ್ರ್ತ + ಆಭರಣ= ವಸ್ತ್ರಾಭರಣ. 16. ಗೌರಿ+ಈಶ =ಗೌರೀಶ. 17. ಕಟು+ಉಕ್ತಿ=ಕಟೂಕ್ತಿ. 18. ಕೃಷ್ಣ +ಅಜಿನ=ಕೃಷ್ಣಾಜಿನ. 19. ಪೀತ+ಅಂಬರ=ಪೀತಾಂಬರ. 20. ಏಕ+ಆಸ...

ಕನ್ನಡದ ಮೊದಲುಗಳು ಕನ್ನಡದ ಬಗ್ಗೆ ಪ್ರಮುಖ ಮಾಹಿತಿಗಳು